Webdunia - Bharat's app for daily news and videos

Install App

ದರ್ಶನ್ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು

Krishnaveni K
ಬುಧವಾರ, 12 ಜೂನ್ 2024 (17:38 IST)
ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರವಾಗಿ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಸಚಿವ ಜಮೀರ್ ಅಹ್ಮದ್ ಜೊತೆಗೆ ದರ್ಶನ್ ಆತ್ಮೀಯ ಸಂಬಂಧವಿದೆ. ಈ ಹಿನ್ನಲೆಯಲ್ಲಿ ದರ್ಶನ್ ಬಂಧನವಾಗುತ್ತಿದ್ದಂತೇ ರಾಜ್ಯ ಸರ್ಕಾರದ ಸಚಿವರ ಪ್ರಭಾವದಿಂದ ಅವರು ಬಚಾವ್ ಆಗಬಹುದು ಎಂಬ ಕುಹುಕಗಳು ಕೇಳಿಬಂದಿದ್ದವು. ಆದರೆ ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜಮೀರ್ ಗೆ ಕರೆ ಮಾಡಿ ಈ ವಿಚಾರದಲ್ಲಿ ತಲೆ ಹಾಕದಂತೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಜಮೀರ್ ಪುತ್ರನ ಸಿನಿಮಾ ಪ್ರಚಾರ ಕಾರ್ಯಕ್ಕೆ ದರ್ಶನ್ ನೆರವಾಗಿದ್ದರು. ಅಲ್ಲದೆ, ಜಮೀರ್ ಮನೆಗೂ ದರ್ಶನ್ ಆಗಾಗ ಭೇಟಿ ನೀಡುತ್ತಿದ್ದರು. ಆದರೆ ಇದೀಗ ದರ್ಶನ್ ಮೇಲೆ ದಾಖಲಾಗಿರುವುದು ಹಲ್ಲೆ ಮತ್ತು ಹತ್ಯೆ ಪ್ರಕರಣ. ಈ ಪ್ರಕರಣದಲ್ಲಿ ಸಚಿವರೇನಾದರೂ ಒತ್ತಡ ಹಾಕಲು ಹೋದರೆ ಅದರಿಂದ ಸರ್ಕಾರಕ್ಕೇ ಕೆಟ್ಟ ಹೆಸರು.

ಹೀಗಾಗಿ ಕೇಸ್ ನಲ್ಲಿ ನಿನ್ನ ಹೆಸರು ಕೇಳಿಬಂದರೆ ಈ ಹಿಂದೆ ನಾಗೇಂದ್ರಗೆ ಮಾಡಿದಂತೆ ನಿನ್ನ ಸ್ಥಾನಕ್ಕೂ ಕುತ್ತ ಬರಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರಂತೆ. ಅಲ್ಲದೆ, ಮಾಧ್ಯಮಗಳ ಮುಂದೆಯೂ ದರ್ಶನ್ ಪರವಾಗಿ ಹೇಳಿಕೆಗಳನ್ನು ಕೊಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments