Webdunia - Bharat's app for daily news and videos

Install App

ದರ್ಶನ್ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು

Krishnaveni K
ಬುಧವಾರ, 12 ಜೂನ್ 2024 (17:38 IST)
ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರವಾಗಿ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಸಚಿವ ಜಮೀರ್ ಅಹ್ಮದ್ ಜೊತೆಗೆ ದರ್ಶನ್ ಆತ್ಮೀಯ ಸಂಬಂಧವಿದೆ. ಈ ಹಿನ್ನಲೆಯಲ್ಲಿ ದರ್ಶನ್ ಬಂಧನವಾಗುತ್ತಿದ್ದಂತೇ ರಾಜ್ಯ ಸರ್ಕಾರದ ಸಚಿವರ ಪ್ರಭಾವದಿಂದ ಅವರು ಬಚಾವ್ ಆಗಬಹುದು ಎಂಬ ಕುಹುಕಗಳು ಕೇಳಿಬಂದಿದ್ದವು. ಆದರೆ ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜಮೀರ್ ಗೆ ಕರೆ ಮಾಡಿ ಈ ವಿಚಾರದಲ್ಲಿ ತಲೆ ಹಾಕದಂತೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಜಮೀರ್ ಪುತ್ರನ ಸಿನಿಮಾ ಪ್ರಚಾರ ಕಾರ್ಯಕ್ಕೆ ದರ್ಶನ್ ನೆರವಾಗಿದ್ದರು. ಅಲ್ಲದೆ, ಜಮೀರ್ ಮನೆಗೂ ದರ್ಶನ್ ಆಗಾಗ ಭೇಟಿ ನೀಡುತ್ತಿದ್ದರು. ಆದರೆ ಇದೀಗ ದರ್ಶನ್ ಮೇಲೆ ದಾಖಲಾಗಿರುವುದು ಹಲ್ಲೆ ಮತ್ತು ಹತ್ಯೆ ಪ್ರಕರಣ. ಈ ಪ್ರಕರಣದಲ್ಲಿ ಸಚಿವರೇನಾದರೂ ಒತ್ತಡ ಹಾಕಲು ಹೋದರೆ ಅದರಿಂದ ಸರ್ಕಾರಕ್ಕೇ ಕೆಟ್ಟ ಹೆಸರು.

ಹೀಗಾಗಿ ಕೇಸ್ ನಲ್ಲಿ ನಿನ್ನ ಹೆಸರು ಕೇಳಿಬಂದರೆ ಈ ಹಿಂದೆ ನಾಗೇಂದ್ರಗೆ ಮಾಡಿದಂತೆ ನಿನ್ನ ಸ್ಥಾನಕ್ಕೂ ಕುತ್ತ ಬರಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರಂತೆ. ಅಲ್ಲದೆ, ಮಾಧ್ಯಮಗಳ ಮುಂದೆಯೂ ದರ್ಶನ್ ಪರವಾಗಿ ಹೇಳಿಕೆಗಳನ್ನು ಕೊಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments