Webdunia - Bharat's app for daily news and videos

Install App

ನಟ ದರ್ಶನ್ ಮತ್ತು ಇತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ

Krishnaveni K
ಸೋಮವಾರ, 26 ಆಗಸ್ಟ್ 2024 (14:18 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆದ ಹಿನ್ನಲೆಯಲ್ಲಿ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಈಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ದರ್ಶನ್ ಮತ್ತು ಇತರೆ ಖೈದಿಗಳನ್ನು ಬೇರೆ ಜೈಲಿಗೆ ವರ್ಗಾಯಿಸಲು ಸ್ವತಃ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂದನದಲ್ಲಿರುವ ನಟ ದರ್ಶನ್ ಗೆ ಜೈಲಿನಲ್ಲಿ ಸಿಗರೇಟು, ಕಾಫಿ, ಬೆಡ್, ಮದ್ಯ ಸೇರಿದಂತೆ ವಿಐಪಿ ಟ್ರೀಟ್ ಮೆಂಟ್ ನೀಡಲಾಗುತ್ತಿದೆ ಎಂಬುದಕ್ಕೆ ಪುರಾವೆ ನೀಡುವಂತಹ ಫೋಟೋಗಳು ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ನಟ ದರ್ಶನ್ ಗೆ ವಿಐಪಿ ಟ್ರೀಟ್ ಮೆಂಟ್ ನೀಡಲು ಅನುಕೂಲ ಮಾಡಿಕೊಟ್ಟಿರುವ ಅಧಿಕಾರಿಗಳ ಅಮಾನತಿಗೆ ಸೂಚನೆ ನೀಡಿದ್ದೇನೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

ಅಷ್ಟೇ ಅಲ್ಲ, ದರ್ಶನ್ ಮತ್ತು ಇತರೆ ಖೈದಿಗಳನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಮತ್ತು ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments