Webdunia - Bharat's app for daily news and videos

Install App

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಸಿಎಂ ಸಿದ್ದರಾಮಯ್ಯ ಸಭೆಯ ಹೈಲೈಟ್ಸ್ ಇಲ್ಲಿದೆ

Krishnaveni K
ಶುಕ್ರವಾರ, 18 ಅಕ್ಟೋಬರ್ 2024 (15:47 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ,  ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.

ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು.

ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು  2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ  ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ  ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.

ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿಯನ್ನು ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments