Webdunia - Bharat's app for daily news and videos

Install App

ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕು ನೀಡಿದ ನಾರಾಯಣ ಗುರುಗಳಿಗೆ ಸಿಎಂ ಸಿದ್ದರಾಮಯ್ಯ ನಮನ

Sampriya
ಮಂಗಳವಾರ, 20 ಆಗಸ್ಟ್ 2024 (19:17 IST)
Photo Courtesy X
ಬೆಂಗಳೂರು: ಶ್ರೀ ನಾರಾಯಣ ಗುರು ಅವರು ಒಬ್ಬ ತತ್ವಜ್ಞಾನಿ, ಆಧ್ಯಾತ್ಮಕಿ ನಾಯಕ ಮತ್ತು ಸಮಾಜ ಸುಧಾರಕರು. ಅವರು ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಸಲುವಾಗಿ ಕೇರಳದ ಜಾತಿ-ಪೀಡಿತ ಸಮಾಜದಲ್ಲಿನ ಅನ್ಯಾಯದ ವಿರುದ್ಧ ಸುಧಾರಣಾ ಚಳುವಳಿಯನ್ನು ನಡೆಸಿದರು .

"ಒಂದು ಜಾತಿ, ಒಂದು ಧರ್ಮ ಮತ್ತು ಎಲ್ಲಾ ಮಾನವರಿಗೆ ಒಂದೇ ದೇವರು" ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ. ಇಂದು ನಾರಾಯಣಗ ಗುರುಗಳ ಜಯಂತಿಯನ್ನು ಆಚರಿಸಲಾಗುತ್ತದೆ.

ನಾರಾಯಣ ಗುರುಗಳ ಜಯಂತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿ ನಮನಗಳನ್ನು ಸಲ್ಲಿಸಿದ್ದಾರೆ.

ಧಾರ್ಮಿಕ ಮತ್ತು ಸಾಮಾಜಿಕ‌ ಸುಧಾರಣೆಗೆ  ನಾರಾಯಣ ಗುರುಗಳದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ದೇವಾಲಯಗಳಿಗೆ ಹೋಗುವ ಹಕ್ಕು ತಮಗಿಲ್ಲವಾದರೆ ಆ ದೇವಾಲಯಗಳನ್ನೇ ನಿಮ್ಮಲ್ಲಿಗೆ ತರುತ್ತೇನೆ ಎಂದು ಘೋಷಿಸಿದ ಗುರುಗಳು, ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕನ್ನು ನೀಡುವ ಮೂಲಕ ಅವರಲ್ಲಿ ಸ್ವಾಭಿಮಾನದ ಜಾಗೃತಿಗೆ ಕಾರಣರಾದರು. ನಾರಾಯಣ ಗುರುಗಳು ತಮ್ಮ ಚಳುವಳಿಯ ಉದ್ದಕ್ಕೂ ದೇವಾಲಯಗಳನ್ನು  ಸಾಮಾಜಿಕ ಪರಿವರ್ತನೆಯ ಸಾಧನವನ್ನಾಗಿ ಬಳಸಿದರು.

ಆಧ್ಯಾತ್ಮ ಗುರುವಾಗಿ ಪಾರಮಾರ್ಥಿಕಕ್ಕಷ್ಟೇ ಅಂಟಿಕೊಳ್ಳದೆ ಲೌಕಿಕವೆನಿಸಿಕೊಂಡ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಪರಿವರ್ತನೆಯನ್ನು ಮಾಡಿ ತೋರಿಸಿದ ನಾರಾಯಣ ಗುರುಗಳಿಗೆ ನನ್ನ ಗೌರವ ಪೂರ್ವಕ ನಮನಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments