Select Your Language

Notifications

webdunia
webdunia
webdunia
webdunia

ಮಂಗಳೂರು ಮೇಯರ್‌ ಕವಿತಾ ಹೊಟ್ಟೆಗೆ ಪಂಚ್ ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು ಮೇಯರ್‌ ಕವಿತಾ ಹೊಟ್ಟೆಗೆ ಪಂಚ್ ನೀಡಿದ ಸಿಎಂ ಸಿದ್ದರಾಮಯ್ಯ
ಮಂಗಳೂರು , ಶನಿವಾರ, 4 ನವೆಂಬರ್ 2017 (15:16 IST)
ನಗರದ ಮೇಯರ್ ಕವಿತಾ ಸಾನಿಲ್ ಅವರಿಗೆ ಸಿಎಂ ಸಿದ್ದರಾಮಯ್ಯ ಪಂಚ್ ನೀಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮೇಯರ್ ಕವಿತಾ ಕರಾಟೆ ತೋರಿಸಲು ಸಿದ್ದರಾದಾಗ ಸಿಎಂ ಸಿದ್ದರಾಮಯ್ಯ ಅವರ ಹೊಟ್ಟೆಗೆ ಪಂಚ ನೀಡಿದ್ದಾರೆ.
 
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ, ಮೇಯರ್‌ ಕವಿತಾ ಸಾನಿಲ್‌ಗೆ ಪಂಚ ನೀಡಿರುವುದು ನೋಡಿ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದ್ದಾರೆ.
 
ಸಿಎಂ ಸಿದ್ದರಾಮಯ್ಯರವರ ಹಾಸ್ಯಪ್ರಜ್ಞೆ ನೆರೆದಿದ್ದವರ ಮುಖದಲ್ಲಿ ಮಂದಹಾಸ ತರಿಸಿತು. ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟನೆಯ ನಂತರ ಸಿಎಂ ಶ್ರವಣಬೆಳಗೊಳಕ್ಕೆ ತೆರಳಿದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಕ್ತ ಕರ್ನಾಟಕ ಎನ್ನುವವರು ಮತ್ತೊಮ್ಮೆ ಹುಟ್ಟಿ ಬರಬೇಕು: ಜಯಮಾಲಾ