Webdunia - Bharat's app for daily news and videos

Install App

ಮಗನನ್ನು ಗೆಲ್ಲಿಸುವ ತಾಕತ್ತಿಲ್ಲದ ಕುಮಾರಸ್ವಾಮಿ ತಾನು ಗೆಲ್ಲಲು ಹೇಗೆ ಸಾಧ್ಯ? ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 27 ಮಾರ್ಚ್ 2024 (16:53 IST)
ಮಂಡ್ಯ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಕಣಕ್ಕಿಳಿಯುತ್ತಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬಗ್ಗೆ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿ ಸೋತಿದ್ದರು. ಅಂದು ಮಗನನ್ನೇ ಗೆಲ್ಲಿಸಲಾಗದ ಕುಮಾರಸ್ವಾಮಿ ಈಗ ತಾವು ಹೇಗೆ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಸಮಾವೇಶದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕ ಕಾರ್ಡ್ ಪ್ಲೇ ಮಾಡಿದರೂ ಈ ಬಾರಿ ಅವರು ಗೆಲ್ಲಲು ಸಾಧ‍್ಯವಿಲ್ಲ. ಮಂಡ್ಯವನ್ನು ತಮ್ಮ ಕರ್ಮಭೂಮಿ ಎನ್ನುತ್ತಿದ್ದಾರೆ. ಹಾಸನದವರಾದ ಕುಮಾರಸ್ವಾಮಿಗೆ ಮಂಡ್ಯ ಹೇಗೆ ಕರ್ಮಭೂಮಿಯಾಗುತ್ತದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇನ್ನು, ಮಂಡ್ಯದಲ್ಲಿ ಕಾಂಗ್ರೆಸ್ ವೀಕ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂಬ ಆರೋಪಗಳನ್ನು ಅವರು ತಳ್ಳಿ ಹಾಕಿದ್ದಾರೆ. ಸ್ಟಾರ್ ಚಂದ್ರು ಮಂಡ್ಯ ಕ್ಷೇತ್ರಕ್ಕೆ ಅಪರಿಚಿತರಲ್ಲ. ಅವರು ವೀಕ್ ಅಭ್ಯರ್ಥಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments