ಅನ್ನ ಭಾಗ್ಯ ಕೊಟ್ಟವರು ಯಾರು, ಬಿಜೆಪಿಯವರಲ್ಲ ನಾನು ಮಾಡಿದ್ದು: ಸಿದ್ದರಾಮಯ್ಯ

Krishnaveni K
ಸೋಮವಾರ, 18 ನವೆಂಬರ್ 2024 (11:28 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ವಿಪಕ್ಷಗಳು ಟೀಕೆ ಮಾಡುತ್ತಿರುವುದಕ್ಕೆ ಇಂದು ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಅನ್ನ ಭಾಗ್ಯ ಕೊಟ್ಟವರು ಯಾರು? ನಾನು ಮಾಡಿದ್ದು, ಸಿದ್ದರಾಮಯ್ಯ ಮಾಡಿದ್ದು ಎಂದು ಹೇಳಿದ್ದಾರೆ.

ಖಜಾನೆ ಬರಿದಾಗಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ರದ್ದು ಮಾಡಿದೆ ಎಂದು ವಿಪಕ್ಷಗಳು ಟೀಕೆ ಮಾಡ್ತಿವೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ ಸಿದ್ದರಾಮಯ್ಯ ಗರಂ ಆದರು. ನಾವು ಯಾವ ಬಡವರಿಗೂ ಅನ್ಯಾಯ ಮಾಡುತ್ತಿಲ್ಲ. ಬಿಪಿಎಲ್ ಕಾರ್ಡ್ ಅನರ್ಹರಿಗೆ ಮಾತ್ರ ರದ್ದು ಮಾಡಿದ್ದೇವೆ. ಅರ್ಹರಿಗೆ ಅಲ್ಲ. ಅರ್ಹರಿಗೆ,  ಬಡವರಿಗೆ ನಾವು ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಳಿಕ ತಮ್ಮದೇ ಶೈಲಿಯಲ್ಲಿ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ‘ರೀ.. ಅನ್ನ ಭಾಗ್ಯ ಯೋಜನೆ ಕೊಟ್ಟವರು ಯಾರು? ಬಿಜೆಪಿಯವರು ಕೊಟ್ರಾ? ನಾನು ಮಾಡಿದ್ದು, ಅಂದರೆ ಸಿದ್ದರಾಮಯ್ಯ ಮಾಡಿದ್ದು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೊಟ್ಟಿದ್ದಾರಾ? ಗುಜರಾತ್ ನಲ್ಲಿ ಇದ್ಯಾ? ಮಧ್ಯಪ್ರದೇಶದಲ್ಲಿ ಮಾಡಿದ್ದಾರಾ? ಬಿಜೆಪಿಯವರು ಸುಮ್ನೇ ಮಾತನಾಡ್ತಾರೆ’ ಎಂದಿದ್ದಾರೆ.

ಇನ್ನು, ರಾತ್ರೋರಾತ್ರಿ ಬಿಪಿಎಲ್ ಕಾರ್ಡ ರದ್ದು ಮಾಡಲಾಗಿದೆ ಎಂಬ ಆರೋಪಗಳಿಗೂ ಉತ್ತರಿಸಿರುವ ಅವರು, ದಿಡೀರ್ ಅಂತ ಯಾವುದೂ ಮಾಡಿಲ್ಲ. ಎಲ್ಲಾ ಸರಿಯಾಗಿ ನೋಡಿಕೊಂಡೇ ಮಾಡಿರೋದು. ಅರ್ಹರಾದವರಿಗೆ ಮಾತ್ರ ಸಿಗಲಿ ಎಂಬ ಉದ್ದೇಶಕ್ಕೆ ಮಾಡಿರೋದು ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments