Webdunia - Bharat's app for daily news and videos

Install App

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರಶ್ನೆಗಳ ಬಾಣ ಹೀಗಿತ್ತು

Krishnaveni K
ಶನಿವಾರ, 25 ಜನವರಿ 2025 (15:07 IST)
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಇಂದು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳ ಬಾಣವನ್ನೇ ಸುರಿಸಿದ್ದಾರೆ. ಅವರ ವಾಗ್ದಾಳಿಯ ವೈಖರಿ ಹೀಗಿತ್ತು ನೋಡಿ.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದ ಸಿ.ಎಂ ಸಿದ್ದರಾಮಯ್ಯ.

*ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

*ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

*ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

*ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

*RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

*ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು.

*ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

*ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ: ಕಂಪನಿಗಳಿಗೆ ಕೇಳಿದ ಸಿಎಂ

*ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು.

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ತಕರಾರು ವ್ಯಕ್ತಪಡಿಸಿ,  ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು  ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು.

*ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments