Webdunia - Bharat's app for daily news and videos

Install App

ಮುಡಾ ಕೇಸ್ ನಲ್ಲಿ ಕ್ಲೀನ್ ಚಿಟ್ ಕೊಟ್ರಲ್ಲಾ ಸಾರ್ ಎಂದರೆ ಏನೂ ಗೊತ್ತಿಲ್ಲಾರೀ ಎಂದ ಸಿದ್ದರಾಮಯ್ಯ

Krishnaveni K
ಗುರುವಾರ, 23 ಜನವರಿ 2025 (11:48 IST)
ಬೆಂಗಳೂರು: ಮುಡಾ ಕೇಸ್ ನಲ್ಲಿ ತಮಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಕೇಳಿದಾಗ ಅವರು ಏನೂ ಗೊತ್ತಿಲ್ಲಾರೀ ಎಂದಿದ್ದಾರೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪವಾಗಿದೆ. ಈ ಕೇಸ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಅದರಂತೆ ಪ್ರಕರಣದ ವಿಚಾರಣೆಯನ್ನು ಲೋಕಾಯುಕ್ತ ಪೊಲೀಸರು ನಡೆಸಿದ್ದರು. ಸಿಎಂ ಮತ್ತು ಪತ್ನಿ ಪಾರ್ವತಿ ಇಬ್ಬರೂ ಒಮ್ಮೆ ಲೋಕಾಯುಕ್ತ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ ಲೋಕಾಯುಕ್ತ ಅಧಿಕಾರಿಗಳೂ ಮುಡಾ ಮಾಜಿ ಆಯುಕ್ತರು, ಅಧಿಕಾರಿಗಳ ತನಿಖೆ ನಡೆಸಿದ್ದಾರೆ.

ಇದೀಗ ತನಿಖೆ ಪೂರ್ಣಗೊಳಿಸಿ ವರದಿ ತಯಾರಿಸಲಾಗಿದ್ದು ಈ ವರದಿಯಲ್ಲಿ ಸಿಎಂ ಮತ್ತು ಪತ್ನಿ ವಿರುದ್ಧದ ಹೇಳಿಕೆಗೆ ಯಾವುದೇ ಪುರಾವೆಯಿಲ್ಲ. ಅಧಿಕಾರಿಗಳಿಂದ ತಪ್ಪಾಗಿತ್ತು ಎಂದು ವರದಿ ನೀಡಲಾಗಿದೆ ಎನ್ನಲಾಗಿದೆ. ಇದನ್ನು ಇನ್ನೂ ಕೋರ್ಟ್ ಗೆ ಸಲ್ಲಿಕೆ ಮಾಡಿಲ್ಲ.

ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಇಂದು ಮಾಧ್ಯಮಗಳು ಪ್ರಶ್ನೆ ಮಾಡಿವೆ. ಈ ವೇಳೆ ಪ್ರತಿಕ್ರಿಯಿಸಿದ ಅವರು ‘ಏನೂ ಗೊತ್ತಿಲ್ಲಾರೀ.. ಏನೂ ಗೊತ್ತಿಲ್ಲ’ ಎಂದು ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments