Webdunia - Bharat's app for daily news and videos

Install App

ಹೆಚ್.ಡಿ.ದೇವೇಗೌಡರ ಆರೋಪಕ್ಕೆ ತೀರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 6 ಏಪ್ರಿಲ್ 2018 (08:07 IST)
ಬೆಂಗಳೂರು : ನೀತಿ ಸಂಹಿತೆ ಜಾರಿಯಾದ ಬಳಿಕವೂ  ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆ ಎಂದು ಹೆಚ್.ಡಿ.ದೇವೇಗೌಡರು ಮಾಡಿರುವ ಆರೋಪಕ್ಕೆ  ಇದೀಗ ಸಿಎಂ ಸಿದ್ದರಾಮಯ್ಯ ಅವರು ತೀರುಗೇಟು ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ  ಸಿಎಂ ಸಿದ್ದರಾಮಯ್ಯ ಅವರು,’ ನೀತಿ ಸಂಹಿತೆ ಜಾರಿ ಆದ ಬಳಿಕ ಯಾರು ನಮ್ಮ ಮನೆಗೆ ಬಂದಿಲ್ಲ. ಮುಖ್ಯ ಕಾರ್ಯದರ್ಶಿ ಬಿಟ್ಟು ಬೇರೆಯಾರು ಬಂದಿಲ್ಲ. ಪಿಎಂ ಆದಾಗ ಅವರು ಮಾಡಿರಬೇಕು. ಹೀಗಾಗಿ ಆ ರೀತಿ ಮಾತನಾಡಿದ್ದಾರೆ’ ಎಂದಿದ್ದಾರೆ.


‘ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಭ್ರಮಾಲೋಕದಲ್ಲಿ ಇದ್ದಾರೆ. ಇವರೆಲ್ಲ ಭ್ರಮಾಲೋಕದಲ್ಲಿ ತೇಲಾಡೋದಕ್ಕೆ ನಮಗೆ ಯಾವುದೇ ಅಭ್ಯಂತರವಿಲ್ಲ. ನನ್ನನ್ನು ಸೋಲಿಸಲು ಮತ್ತೊಮ್ಮೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಈಗ ಒಂದಾಗಿರಬೇಕು. 2006 ರಲ್ಲಿ ನನ್ನನ್ನು ಸೋಲಿಸಲು ಒಂದಾಗಿದ್ದರು. ಆಗ ಏನಾಯಿತು? ಚುನಾವಣೆಯಲ್ಲಿ ನಾನು ಗೆದ್ದಿದ್ದೆ. ಈಗ ಮತ್ತೆ ನಾನೇ ಗೆಲ್ಲೋದು. ನನ್ನನ್ನು ಸೋಲಿಸುವುದೇ ಅವರ ಗುರಿ ಅಂತೆ. ನಮಗೂ ಸೋಲಿಸುವುದು ಗೊತ್ತು. ಮತ ಕೊಡುವುದು ಮತದಾರರು ಅನ್ನುವುದನ್ನು ಮರೆಯುವುದು ಬೇಡ ಎಂದು ಇಬ್ಬರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments