Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಹಾಸನ , ಶನಿವಾರ, 6 ಡಿಸೆಂಬರ್ 2025 (16:00 IST)
ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಅಡಿಯಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿರುವುದೇ ಸಮಾನತೆ ತರಲೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ವಿಪಕ್ಷಗಳು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಚನೆ ಬಗ್ಗೆ ಟೀಕೆ ಮಾಡುತ್ತಲೇ ಬಂದಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಅವರು, ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷಕ್ಕೂ ಹೆಚ್ಚು ಕೋಟಿ ರೂ. ಹಣ ಖರ್ಚು ಮಾಡುವುದು ಸಮಾನತೆ ತರಲು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಈ ಎಲ್ಲ ಟೀಕೆಗಳಿಗೆ ಜನರೇ ಉತ್ತರಿಸಬೇಕೆಂದರು. 

ಇನ್ನೂ ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇನ್ನೂ ನಾನು ಯಾವುದೇ ವಿಚಾರದಲ್ಲಿ ಮಾತು ಕೊಟ್ಮೇಲೆ ಅದನ್ನು ಮಾಡೇ ಮಾಡ್ತೀನಿ ಎಂದರು. 

ಡಿಕೆಶಿ ಯಾವಾಗಲೂ ಹೇಳುತ್ತಿರುತ್ತಾರೆ, ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳು ಉಳಿಯುತ್ತವೆ ಎಂದಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ