Webdunia - Bharat's app for daily news and videos

Install App

ದೀಪಾವಳಿಗೆ ಪಟಾಕಿ ಹೊಡೆಯಲು ರೂಲ್ಸ್ ಮಾಡಿದ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 26 ಅಕ್ಟೋಬರ್ 2024 (15:43 IST)
ಬೆಂಗಳೂರು: ದೀಪಾವಳಿ ಹಬ್ಬ ಹತ್ತಿರ ಬಂದಿದ್ದು, ಮತ್ತೆ ಪಟಾಕಿ ಹೊಡೆಯುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೆಲವೊಂದು ನಿಯಮ ರೂಪಿಸಿದೆ. ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಮಾತ್ರ ಹೊಡೆಯಲು ಅವಕಾಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೀಪಾವಳಿ ಹಬ್ಬ ಬಂತೆಂದರೆ ಸಾಕು ಹೋದಲ್ಲಿ ಬಂದಲ್ಲಿ ಪಟಾಕಿ ಹೊಡೆಯುವವರೇ ಹೆಚ್ಚು. ಇದರಿಂದಾಗಿ ವಾಯು ಮಾಲಿನ್ಯವಾಗುತ್ತದೆ. ಜೊತೆಗೆ ಪ್ರಾಣಿ ಪಕ್ಷಿಗಳಿಗೂ ತೊಂದರೆಯಾಗುತ್ತದೆ. ಈ ಕಾರಣಕ್ಕೆ ಸರ್ಕಾರ ನಿಯಂತ್ರಣ ಹೇರುತ್ತಲೇ ಇರುತ್ತದೆ. ಆದರೂ ಕೆಲವರು ನಿಯಮ ಮೀರಿ ಪಟಾಕಿ ಹೊಡೆಯುತ್ತಾರೆ.

ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ. ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ತಗ್ಗಿಸುವ ದೃಷ್ಟಿಯಿಂದ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದಿರುವ ಸಿಎಂ ಪಟಾಕಿ ಅವಘಡಗಳಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಅವರು ಈ ಸೂಚನೆಗಳನ್ನು ನೀಡಿದ್ದಾರೆ. ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಹಚ್ಚಲು ಅವಕಾಶ ನೀಡಬೇಕು. ಪಟಾಕಿ ದಾಸ್ತಾನು ಮಾಡುವ ಗೋದಾಮುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಿಯಮ ಮೀರಿದರೆ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments