ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

Sampriya
ಶನಿವಾರ, 18 ಅಕ್ಟೋಬರ್ 2025 (14:30 IST)
ಮೈಸೂರು: ಯಾವುದೇ ಸಂಘ ಸಂಸ್ಥೆ ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡುವ ಮೊದಲು ಅನುಮತಿ ತೆಗೆದುಕೊಳ್ಳಬೇಕು. ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್‌ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡುವುದಕ್ಕೆ ಮುನ್ನ ಅನುಮತಿ ಪಡೆಯಬೇಕು. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಇದ್ದಾಗಲೇ ಆ ಬಗ್ಗೆ ಸುತ್ತೋಲೆ ಹೊರಡಿಸಿದ್ದರು. ಅದನ್ನು ನಾವೀಗ ಅನುಷ್ಠಾನಕ್ಕೆ ತಂದಿದ್ದೇವೆ. ಅವರು ಕ್ರಮ ಕೈಗೊಂಡಿದ್ದಾಗ ಆರ್‌ಎಸ್‌ಎಸ್‌ನವರು ಏಕೆ ವಿರೋಧಿಸಲಿಲ್ಲ ಎಂದು ಪ್ರಶ್ನೆ ಮಾಡಿದರು.

‌ಈ ವಿಷಯದಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ. ಜನತೆ, ಬಡವರ ಕೆಲಸವನ್ನು ಅವರು ಮಾಡುವುದೇ ಇಲ್ಲ. ಸದಾ ರಾಜಕಾರಣದಲ್ಲಿ ತೊಡಗುವುದೇ ಅದರ ಕೆಲಸ ಎಂದು ದೂರಿದರು. 

ಇನ್ನೂ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ನವರು ಹಾಕಿದ್ದ ಬ್ಯಾನರ್, ಭಗವಾಧ್ವಜ ತೆರವುಗೊಳಿಸಿರುವ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ಪಡೆದ ಬಳಿಕ ಪ್ರತಿಕ್ರಿಯಿಸುತ್ತೇನೆ. ಬಿಜೆಪಿಯಿಂದ ಕರ್ನಾಟಕದಲ್ಲಿ ಶಾಂತಿ ಭಂಗ ಮಾಡಲು ಸಾಧ್ಯವಿಲ್ಲ. ಪೊಲೀಸರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments