ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

Sampriya
ಶನಿವಾರ, 18 ಅಕ್ಟೋಬರ್ 2025 (14:30 IST)
ಮೈಸೂರು: ಯಾವುದೇ ಸಂಘ ಸಂಸ್ಥೆ ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡುವ ಮೊದಲು ಅನುಮತಿ ತೆಗೆದುಕೊಳ್ಳಬೇಕು. ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್‌ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡುವುದಕ್ಕೆ ಮುನ್ನ ಅನುಮತಿ ಪಡೆಯಬೇಕು. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಇದ್ದಾಗಲೇ ಆ ಬಗ್ಗೆ ಸುತ್ತೋಲೆ ಹೊರಡಿಸಿದ್ದರು. ಅದನ್ನು ನಾವೀಗ ಅನುಷ್ಠಾನಕ್ಕೆ ತಂದಿದ್ದೇವೆ. ಅವರು ಕ್ರಮ ಕೈಗೊಂಡಿದ್ದಾಗ ಆರ್‌ಎಸ್‌ಎಸ್‌ನವರು ಏಕೆ ವಿರೋಧಿಸಲಿಲ್ಲ ಎಂದು ಪ್ರಶ್ನೆ ಮಾಡಿದರು.

‌ಈ ವಿಷಯದಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ. ಜನತೆ, ಬಡವರ ಕೆಲಸವನ್ನು ಅವರು ಮಾಡುವುದೇ ಇಲ್ಲ. ಸದಾ ರಾಜಕಾರಣದಲ್ಲಿ ತೊಡಗುವುದೇ ಅದರ ಕೆಲಸ ಎಂದು ದೂರಿದರು. 

ಇನ್ನೂ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ನವರು ಹಾಕಿದ್ದ ಬ್ಯಾನರ್, ಭಗವಾಧ್ವಜ ತೆರವುಗೊಳಿಸಿರುವ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ಪಡೆದ ಬಳಿಕ ಪ್ರತಿಕ್ರಿಯಿಸುತ್ತೇನೆ. ಬಿಜೆಪಿಯಿಂದ ಕರ್ನಾಟಕದಲ್ಲಿ ಶಾಂತಿ ಭಂಗ ಮಾಡಲು ಸಾಧ್ಯವಿಲ್ಲ. ಪೊಲೀಸರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments