Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ 40 ವರ್ಷದಿಂದ ಹಾಕಿಕೊಂಡಿದ್ದ ಮುಖವಾಡ ಕಳಚಿದೆ: ಆರ್‌ ಅಶೋಕ್

Sampriya
ಶನಿವಾರ, 20 ಜುಲೈ 2024 (15:33 IST)
ಬೆಂಗಳೂರು: "ಮೂರು ಬಿಟ್ಟವರು ಊರಿಗೆ ದೊಡ್ಡವರು" ಎಂಬಂತೆ ದಲಿತರ ದುಡ್ಡು ಹೊಡೆದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಲೆಕ್ಕ ಕೊಡಿ ಸ್ವಾಮಿ ಅಂದರೆ ಎಲ್ಲ ಪತ್ರಿಕೆಗಳಲ್ಲೂ ಪುಟಗಟ್ಟಲೆ ಜಾಹೀರಾತು ಕೊಟ್ಟು ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿಬರೆದುಕೊಂಡಿರುವ ಆರ್‌ ಅಶೋಕ್ ಅವರು, ಕಾಂಗ್ರೆಸ್‌ನ ತಟ್ಟೆಯಲ್ಲಿ ದೊಡ್ಡ ಹೆಗ್ಗಣ ಬಿದ್ದು ಭ್ರಷ್ಟಾಚಾರದ ಗಬ್ಬು ವಾಸನೆ ದೇಶಕ್ಕೆಲ್ಲಾ ಬಡಿಯುತ್ತಿದ್ದರೆ, ಹಿಂದಿನ ಸರ್ಕಾರಗಳ ತಟ್ಟೆಯಲ್ಲಿ ನೊಣ ಬಿದ್ದಿತ್ತು ಎಂದು ತಿಪ್ಪೆ ಸಾರಿಸುತ್ತೀರಲ್ಲ, ನಿಮ್ಮ ಭಂಡತನಕ್ಕೆ ಏನು ಹೇಳೋಣ?

ತಮ್ಮ ಸರ್ಕಾರದಲ್ಲಿ, ಅದರಲ್ಲೂ ತಾವೇ ನಿರ್ವಹಿಸುವ ಹಣಕಾಸು ಇಲಾಖೆಯ ಮೂಗಿನಡಿ ಭ್ರಷ್ಟಾಚಾರ ನಡೆದಿರುವಾಗ, ಅದಕ್ಕೆ ಮುಖ್ಯಮಂತ್ರಿಯಾಗಿ ತಾವು ಜವಾಬ್ದಾರರಲ್ಲ, ಅಂದರೆ ಅದರ ಈ ಹಗರಣದ ಹೊಣೆ ನಿಮ್ಮ ಪ್ರಕಾರ ಯಾರು ಹೊರಬೇಕು?

40 ವರ್ಷಗಳಿಂದ ತಾವು ಹಾಕಿಕೊಂಡಿದ್ದ ಎಲ್ಲ ಮುಖವಾಡಗಳು ಕಳಚಿ ಬಿದ್ದಿವೆ. ಸಮಾಜವಾದಿ ಎಂಬ ಸೋಗಿನಲ್ಲಿ ದಲಿತರ ದುಡ್ಡು ಲೂಟಿ ಹೊಡೆಯುವ ತಮ್ಮ ಮುಖವಾಡ ಬಯಲಾಗಿದೆ. ತಮ್ಮ ಡೋಂಗಿ 'ಶುದ್ಧ'ಹಸ್ತಕ್ಕೆ ಎಂದೂ ಅಳಿಸಲಾಗದ ಭ್ರಷ್ಟಚಾರದ ಮಸಿ ಅಂಟಿಕೊಂಡಿದೆ.

ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿ, SCSP/TSP ನಿಧಿಯ ₹14,000 ಕೋಟಿ ದುರುಪಯೋಗ, ಮುಡಾದಲ್ಲಿ 35 ಕೋಟಿ ಬೆಲೆಬಾಳುವ 14 ಸೈಟು ಗುಳುಂ, ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲೇ ಇಷ್ಟು ಲೂಟಿ ಮಾಡಿರುವ ತಾವು ಇನ್ನು ತಮ್ಮ ಮೊದಲ ಅವಧಿಯಲ್ಲಿ ಎಷ್ಟು ಸಾವಿರ ಕೋಟಿ ಹಣ ಲೂಟಿ ಮಾಡಿದ್ದೀರೋ ಆ ದೇವರೇ ಬಲ್ಲ.

ಪತ್ರಿಕೆಗಳಲ್ಲಿ ಪುಟಗಟ್ಟಲೆ ಜಾಹೀರಾತು ಕೊಟ್ಟುಬಿಟ್ಟರೆ, ಪತ್ರಿಕಾಗೋಷ್ಠಿ ಮಾಡಿ ನಾಲ್ಕು ದುರಹಂಕಾರದ ಮಾತುಗಳನ್ನ ಆಡಿಬಿಟ್ಟರೆ, ಜಾತಿ, ಇಡಿ ಹೆಸರು ಹೇಳಿ ಅನುಕಂಪ ಗಿಟ್ಟಿಸಿಕೊಂಡು ಬಿಟ್ಟರೆ ಈ ಹಗರಣದಿಂದ ಬಚಾವ್ ಆಗಬಹುದು ಎನ್ನುವ ಭ್ರಮೆಯಲ್ಲಿದ್ದರೆ ಅದು ನಿಮ್ಮ ಮೂರ್ಖತನ.

ವಾಲ್ಮೀಕಿ ನಿಗಮದ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವ ತನಕ ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ.

ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದೀರಿ,  ಸತ್ಯವನ್ನ ಮರೆಮಾಚುವ ಪಾಪದ ಕೆಲಸ ಮಾಡಬೇಡಿ. ಸತ್ಯಮೇವ ಜಯತೆ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments