Webdunia - Bharat's app for daily news and videos

Install App

ಹಾಲಿನ ದರ ಏರಿಕೆ ಮಾಡಿ ಮತ್ತಷ್ಟು ಲೂಟಿ ಹೊಡೆಯುವ ಪ್ಲ್ಯಾನ್ ಸಿಎಂ ಸಿದ್ದರಾಮಯ್ಯರದ್ದು: ಆರ್‌ ಅಶೋಕ್ ಆಕ್ರೋಶ

Sampriya
ಶುಕ್ರವಾರ, 13 ಸೆಪ್ಟಂಬರ್ 2024 (19:19 IST)
ಬೆಂಗಳೂರು: ಇನ್ನು ಇರುವಷ್ಟು ದಿನ ಇನ್ನಷ್ಟು ಲೂಟಿ ಹೊಡೆದು ಹೋಗೋಣ ಎಂದು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡಿದಂತೆ ಕಾಣುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದರು.

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಘೋಷಣೆ ಮಾಡಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ವಿಪಕ್ಷ ನಾಯಕ ಆರ್‌ ಅಶೋಕ್ ಪೋಸ್ಟ್ ಹಂಚಿಕೊಂಡಿದ್ದಾರೆ.

 ಉಂಡೂ ಹೋದ ಕೊಂಡೂ ಹೋದ ಎನ್ನುವ ಗಾದೆ ಮಾತಿನಂತೆ ಹೇಗಿದ್ದರೂ ಭ್ರಷ್ಟಾಚಾರ ಮಾಡಿ ಸಿಕ್ಕಿಹಾಕಿಕೊಂಡು ರಾಜೀನಾಮೆ ಕೊಡುವ ಪರಿಸ್ಥಿತಿಗೆ ತಲುಪಿದ್ದೇನೆ, ಇನ್ನು ಇರುವಷ್ಟು ದಿನ ಇನ್ನಷ್ಟು ಲೂಟಿ ಹೊಡೆದು ಹೋಗೋಣ ಎಂದು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡಿದಂತೆ ಕಾಣುತ್ತಿದೆ.

ಅಧಿಕಾರಕ್ಕೆ ಬಂದಾಗಿನಿಂದ ಕಳೆದ 15 ತಿಂಗಳಲ್ಲಿ ಎರಡು ಬಾರಿ ಒಟ್ಟು 5 ರೂಪಾಯಿ ಹಾಲಿನ ದರ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಹಾಲಿನ ದರ ಏರಿಸಲು ಹೊರಟಿದೆ.

ಇತ್ತ ಗ್ರಾಹಕರಿಗೆ ಹಾಲಿನ ಬೆಲೆ ಏರಿಕೆ, ಅತ್ತ ರೈತರಿಗೆ ಹಾಲಿನ ಖರೀದಿ ದರ ಕಡಿತ, ಒಟ್ಟಿನಲ್ಲಿ ಈ ಲೂಟಿಕೋರ ಕಾಂಗ್ರೆಸ್ ಸರ್ಕಾರ ಇರುವವರೆಗೂ ಕನ್ನಡಿಗರಿಗೆ ಉಳಿಗಾಲವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments