Webdunia - Bharat's app for daily news and videos

Install App

ಕಾಂಗ್ರೆಸ್ ಮೇಲಿನ ದಾಳಿ ಭಾರತದ ಇತಿಹಾಸದ ಮೇಲಿನ ದಾಳಿ: ಸಿದ್ದರಾಮಯ್ಯ

Krishnaveni K
ಮಂಗಳವಾರ, 11 ಫೆಬ್ರವರಿ 2025 (16:19 IST)
ಬೆಂಗಳೂರು: ಕಾಂಗ್ರೆಸ್ ಮೇಲಿನ ದಾಳಿಯೆಂದರೆ ಭಾರತದ ಇತಿಹಾಸದ ಮೇಲಿನ ದಾಳಿಯಿದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಹುಲ್, ಕಾಂಗ್ರೆಸ್ ಸಿದ್ಧಾಂತವೂ ಕ್ರಾಂತಿಕಾರಿಯಾಗಿದೆ. ನಾವು ಬ್ರಿಟಿಷರ ವಿರುದ್ಧ ಅಹಿಂಸಾ ಮಾರ್ಗದ ಮೂಲಕ ಹೋರಾಟ ಮಾಡಿದ್ದೆವು. ಆದರೆ ಈಗ ಬಿಜೆಪಿ ಮತ್ತು ಆರ್ ಎಸ್ಎಸ್ ನಿಂದ ಆ ಸಿದ್ಧಾಂತದ ಮೇಲೆ ದಾಳಿಯಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ನ ಮೂಲ ಸಿದ್ಧಾಂತ ರಕ್ಷಣೆ ಇಂದಿನ ತುರ್ತು ಅಗತ್ಯ ಎಂದು ರಾಹುಲ್ ಹೇಳುತ್ತಾರೆ.

ಈ ವಿಡಿಯೋ ಹಂಚಿಕೊಂಡಿರುವ ಸಿದ್ದರಾಮಯ್ಯ ಕಾಂಗ್ರೆಸ್ ಮೇಲಿನ ದಾಳಿ ಭಾರತದ ಇತಿಹಾಸದ ಮೇಲಿನ ದಾಳಿಯಿದ್ದಂತೆ, ಈ ನೆಲದ ಉದಾತ್ತ ಚಿಂತನೆಗಳು ಮತ್ತು ಆದರ್ಶ ಚಿಂತನೆಗಳ ಮೇಲಿನ ದಾಳಿಯಿದ್ದಂತೆ ಎಂದಿದ್ದಾರೆ.

ಕಾಂಗ್ರೆಸ್ ರಕ್ಷಣೆಗೆ ಧಾವಿಸಬೇಕಿರುವುದು ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಪ್ರತಿಯೊಬ್ಬರ ಕರ್ತವ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments