Webdunia - Bharat's app for daily news and videos

Install App

ಪಂಚಮಸಾಲಿಗರಿಗೆ ಬಿಜೆಪಿಯವರು ಟೋಪಿ ಹಾಕಿದ್ದಾರೆ: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (12:22 IST)
ಬೆಳಗಾವಿ: ಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಪಂಚಮಸಾಲಿಗರಿಗೆ ಬೆಂಬಲ ನೀಡುವುದಾಗಿ ಹೇಳುವ ಬಿಜೆಪಿಯವರು ಟೋಪಿ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಶಕ್ತಿಯಿದೆ. ಆದರೆ ಬಿಜೆಪಿಯವರು ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಪಾದಿಸಿದ್ದಾರೆ.  ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿರುವ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಪಂಚಮಸಾಲಿಗರಿಗೆ ಟೋಪಿ ಹಾಕಿ ಹೋಗಿದ್ದಾರೆ. ಅವರು 2ಎ ಕೇಳಿದರೆ ಬಿಜೆಪಿಯವರು 2ಡಿ ಹಾಕಿ ಹೋಗಿದ್ದಾರೆ.  ಹಿಂದೆ ಹೈಕೋರ್ಟ್ ಗೆ ಅಪ್ ಡೇಟ್ ಹಾಕಿದವರು ಯಾರು? ಇದೇ ಬಿಜೆಪಿಯವರು ಅಲ್ಲವೇ? ಇದೇ ಸ್ವಾಮೀಜಿಗಳು ಆಗ ಇದ್ದರಲ್ಲ. ರಸೂಲ್ ಎಂಬಾತ ಸುಪ್ರೀಂ ಕೋರ್ಟ್ ಗೆ ಹೋದರು. ಅಂದು ಅಡ್ವಕೇಟ್ ಜನರಲ್ ಆಗಿದ್ದವರು ಇದರಲ್ಲಿ ಬದಲಾವಣೆ ಮಾಡಲ್ಲ ಎಂದರು.

ಟ್ರ್ಯಾಕ್ಟರ್ ತೆಗೆದುಕೊಂಡು ಹೋರಾಟ ಮಾಡುತ್ತೀವಿ ಎಂದರು. ಶಾಂತಿಯುತ ಹೋರಾಟ ಮಾಡಿ ಎಂದರೂ ಕಾನೂನು ಕೈಗೆ ತೆಗೆದುಕೊಂಡರು. ನಾನೂ ಮೂರು ಜನ ಮಂತ್ರಿಗಳನ್ನು ಕಳುಹಿಸಿದ್ದೆ. ನಾನೇ ಎಲ್ಲಾ ಕಡೆ ಹೋಗಲು ಆಗಲ್ಲ. ಅವರನ್ನೇ ಕರೆಸಿದರೆ ಬರಲಿಲ್ಲ.ಸುವರ್ಣ ಸೌಧಕ್ಕೆ ನುಗ್ಗಲು ಪ್ರಯತ್ನಿಸಿದಾಗ ಅನಿವಾರ್ಯವಾಗಿ ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಸಿಎಂ ಸಮರ್ಥಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments