Webdunia - Bharat's app for daily news and videos

Install App

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ, ಅದಕ್ಕೇ ವಕ್ಫ್ ಬೋರ್ಡ್ ಗೆ ತಿದ್ದುಪಡಿ ತರ್ತಿದೆ: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 8 ಆಗಸ್ಟ್ 2024 (12:12 IST)
ಬೆಂಗಳೂರು:ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು  ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು

ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
 
ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ  ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ  ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.
 
 
ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments