Webdunia - Bharat's app for daily news and videos

Install App

ಕುಡಿಯುವ ನೀರಿನಲ್ಲೂ ಕೇಂದ್ರದಿಂದ ನಮಗೆ ಅನ್ಯಾಯವಾಗಿದೆ: ಲೆಕ್ಕ ಕೊಟ್ಟ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 15 ಫೆಬ್ರವರಿ 2025 (17:58 IST)
ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಕರ್ನಾಟಕದ ಯೋಜನೆ ಹಾಳು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಂಕಿ ಅಂಶ ನೀಡಿ ಆರೋಪ ಮಾಡಿದ್ದಾರೆ.

ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಟ್ವೀಟ್ ಮುಖಾಂತರ ಕೇಂದ್ರ ಮತ್ತು ರಾಜ್ಯದ ಪಾಲಿನ ಲೆಕ್ಕ ನೀಡಿದ್ದಾರೆ.

ಸಿಎಂ ಕೊಟ್ಟಿರುವ ಲೆಕ್ಕ ಹೀಗಿದೆ:

ಜೆಜೆಎಂ ( ಜಲಜೀವನ್ ಮಿಷನ್)ಗೆ ಒಟ್ಟು ಹಂಚಿಕೆ - ₹49,262 ಕೋಟಿ (ಕೇಂದ್ರದ ಪಾಲು - ₹26,119 ಕೋಟಿ, ರಾಜ್ಯದ ಪಾಲು - ₹23,142 ಕೋಟಿ)

ಬಿಡುಗಡೆಯಾದ ಒಟ್ಟು ಅನುದಾನ - ₹32,202 ಕೋಟಿ (ಕೇಂದ್ರದ ಪಾಲು - ₹11,760 ಕೋಟಿ, ರಾಜ್ಯದ ಪಾಲು - ₹20,442 ಕೋಟಿ)

ಕರ್ನಾಟಕದ ಒಟ್ಟು ಖರ್ಚು - ₹29,413 ಕೋಟಿ

 ಕೇಂದ್ರದ ಪಾಲು
➡ ₹26,119 ಕೋಟಿ ಹಂಚಿಕೆ
➡ ಕೇವಲ ₹11,760 ಕೋಟಿ ಬಿಡುಗಡೆಯಾಗಿದೆ - ಶೇ. 45ರಷ್ಟು ಮಾತ್ರ ಬದ್ಧತೆಯನ್ನು ಹೊಂದಿದೆ.

 ರಾಜ್ಯದ ಪಾಲು
➡ ₹23,142 ಕೋಟಿ ಹಂಚಿಕೆ
➡ ₹20,442 ಕೋಟಿ ಬಿಡುಗಡೆ - ಶೇ. 88.3ರಷ್ಟು ಹೆಚ್ಚಿನ ಮೊತ್ತ!

ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ  ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.

 2024-25ನೇ ಸಾಲಿನ ಬಜೆಟ್‌ನಲ್ಲಿ  - ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ

➡ ಕೇಂದ್ರ ಸರ್ಕಾರವು ಜೆಜೆಎಮ್ ಗೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ₹570 ಕೋಟಿ ಮಾತ್ರ ಬಿಡುಗಡೆಯಾಗಿರುತ್ತದೆ.
➡ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ.
➡ ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್ ನಲ್ಲಿ ₹7,652 ಕೋಟಿ ಹಂಚಿಕೆ ಮಾಡಿದ್ದು, ₹4,977 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ - ಇದು ದೇಶದ ಎಲ್ಲಾ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ.
➡ ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – ₹70,163 ಕೋಟಿ
➡ ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ ₹22,694 ಕೋಟಿಗೆ ಇಳಿಸಲಾಗಿದೆ.

ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್ ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ.

ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು.

ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ಕರ್ನಾಟಕದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ. 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments