ಶಿಕ್ಷಣ ಸಂಸ್ಥೆಗಳಿಗೆ ಕ್ರೈಸ್ತರ ಕೊಡುಗೆ ದೊಡ್ಡದು: ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 27 ನವೆಂಬರ್ 2024 (18:28 IST)
ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.‌
 
ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ ಧರ್ಮ ಸಂಸ್ಥೆ ನೀಡಿದ ಉಚಿತ ಮನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. 
 
ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು. 
 
ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು. 
 
ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು. 
 
ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು  ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು.
 
ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು.
 
ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದರು.
 
ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.
 
ಕ್ರೈಸ್ತ ಧರ್ಮ ಗುರುಗಳು, ಕ್ರೈಸ್ತ ಸಂಸ್ಥೆಗಳು ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೂ ಶಿಕ್ಷಣ ಕೊಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ದೊಡ್ಡ ಕೊಡುಗೆ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಸಿಕ್ಕಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ ಎಂದರು. 
 
ದೇವ ಒಂದೇ ನಾಮ ಹಲವು ಎನ್ನುವುದು ಎಲ್ಲರ ನಂಬಿಕೆ. ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶ ಎಂದು ಬಸವಾದಿ ಶರಣರು ಹೇಳಿದ್ದು ಈ ಕಾರಣಕ್ಕಾಗಿಯೇ ಎನ್ನುತ್ತಾ, ದೇವರಿಲ್ಲದ ಜಾಗವೇ ಇಲ್ಲ ಎನ್ನುವ ಸಂದೇಶವನ್ನು ಸಾರಿದ ಕನಕದಾಸರ ಬಾಳೆಹಣ್ಣಿನ ಕತೆಯನ್ನು ವಿವರಿಸಿದರು. 
 
ಅಂಬೇಡ್ಕರ್ ಅವರು ಸಂವಿಧಾನ ಅಂಗೀಕಾರ ಸಭೆಯಲ್ಲಿ ಮಾಡಿದ ಭಾಷಣವನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು. 
 
ಕ್ರೈಸ್ತ ಧರ್ಮದ ಮಹಾನ್ ಧರ್ಮಗುರು ಪೀಟರ್ ಮಚಾಡೋ, ಸಚಿವರಾದ ಕೆ.ಜೆ.ಜಾರ್ಜ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಸಕರಾದ ಭರತ್ ರೆಡ್ಡಿ, ನಾಗೇಂದ್ರ, ಅನ್ನಪೂರ್ಣ ತುಕಾರಾಮ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮುಂದಿನ ಸುದ್ದಿ
Show comments