Webdunia - Bharat's app for daily news and videos

Install App

ಗಂಗಾನದಿ ಸ್ನಾನದಿಂದ ಪಾಪ, ಪುಣ್ಯ ಪರಿಹಾರ ಎಲ್ಲಾ ಗೊತ್ತಿಲ್ಲ, ನಾವು ಬಸವಣ್ಣನ ಅನುಯಾಯಿಗಳು ಎಂದ ಸಿದ್ದರಾಮಯ್ಯ

Krishnaveni K
ಬುಧವಾರ, 29 ಜನವರಿ 2025 (14:36 IST)
ಬೆಂಗಳೂರು: ಗಂಗಾ ನದಿಯಲ್ಲಿ ಮುಳುಗಿ ಏಳುವುದರಿಂದ ಪಾಪ, ಪುಣ್ಯ ಎಲ್ಲಾ ಪರಿಹಾರವಾಗುತ್ತದೆ ಎಂಬುದೆಲ್ಲಾ ನನಗೆ ಗೊತ್ತಿಲ್ಲ. ನಾವು ಬಸವಣ್ಣನವರ ಅನುಯಾಯಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೊನ್ನೆಯಷ್ಟೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ರೂ ಮೋದಿ, ಅಮಿತ್ ಶಾ ಪಾಪ ಕಳೆಯಲ್ಲ, ಕುಂಭಮೇಳದಿಂದ ಬಡತನ ನಿವಾರಣೆಯಾಗಲ್ಲ ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆ ಬಿಜೆಪಿ ಮತ್ತು ಹಿಂದೂಗಳ ಆಕ್ರೋಶಕ್ಕೆ ಕಾರಣವಾಯಿತು. ಖರ್ಗೆ ಇದೇ ಮಾತನ್ನು ಅನ್ಯಧರ್ಮದ ಆಚರಣೆ ಬಗ್ಗೆ ಹೇಳುವ ತಾಕತ್ತ ತೋರಿಸಲಿ ಎಂದು ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಕಿಡಿ ಕಾರಿದ್ದರು. ಇದರ ಬಗ್ಗೆ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಗಂಗಾನದಿಯಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತದೆ ಎಂದು ನಂಬಿಕೆಯಿದೆ. ಆದರೆ ನಾವೆಲ್ಲಾ ಬಸವಣ್ಣನವರ ಅನುಯಾಯಿಗಳು. ಪಾಪ, ಪುಣ್ಯ ಎಲ್ಲ ಹೆಂಗೆ? ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ನಂಬಿದ್ದೇವೆ. ನನ್ನ ಅಭಿಪ್ರಾಯ ಕೂಡಾ ಅಷ್ಟೇ. ನಮ್ಮ ಸಂಪ್ರದಾಯ ಇದು ಅಷ್ಟೇ ಎಂದು ಖರ್ಗೆ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments