Webdunia - Bharat's app for daily news and videos

Install App

ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ: ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 7 ಡಿಸೆಂಬರ್ 2024 (14:16 IST)
ಚಾಮರಾಜನಗರ: ನಾನು ನನ್ನ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಮಾತುಗಳ ನಡುವೆ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.

 
ಚಾಮರಾಜನಗರದಲ್ಲಿ ಇಂದು ಹಳೇ ವಿದ್ಯಾರ್ಥಿಗಳೇ ಮರು ನಿರ್ಮಾಣ ಮಾಡಿದ ಸರ್ಕಾರೀ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

 
ನಾನು ನನ್ನ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ. ಜನರ, ಪ್ರೀತಿ, ಅಭಿಮಾನ ಗಳಿಸದೇ ಇದ್ದರೆ ರಾಜಕೀಯ ಜೀವನದಲ್ಲಿ ಇಷ್ಟು ದಿನ ಇರಲು ಸಾಧ್ಯವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಜೊತೆ ಒಪ್ಪಂದವಾಗಿತ್ತು ಎಂದಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಸಿಎಂ ಈ ರೀತಿ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

 
ಚಾಮರಾಜನಗರಕ್ಕೆ ಬಂದರೆ ಸಿಎಂ ಸ್ಥಾನ ಉಳಿಯಲ್ಲ ಎಂದು ಅನೇಕರು ಹೇಳಿದ್ದರು. ಜೆಎಚ್ ಪಟೇಲ್ ಕಾಲದಿಂದ ಇದು ಜಾರಿಯಲ್ಲಿದೆ. ಆದರೆ ನಾನು ಮುಖ್ಯಮಂತ್ರಿಯಾದ ಬಳಿಕ ಎರಡನೇ ಬಾರಿಗೆ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಈ ಮೂಢ ನಂಬಿಕೆಯನ್ನು ನಂಬಿರಲಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments