ದರ್ಶನ್ ಕೇಸ್ ನಲ್ಲಿ ಯಾರು ಒತ್ತಡ ಹಾಕಿದ್ರೂ ಡೋಂಟ್ ಕೇರ್ ಎಂದ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 19 ಜೂನ್ 2024 (15:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ಮಹತ್ವದ ಘಟ್ಟದಲ್ಲಿರುವಾಗ ವಿಶೇಷ ಅಭಿಯೋಜಕ (ಎಸ್ ಪಿಪಿ)ರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಮಾಡಿರುವ ಪೊಲೀಸರು ನಾಳೆ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಈಗ ವಿಚಾರಣೆ ಒಂದು ಹಂತಕ್ಕೆ ಬಂದಿದೆ. ಈ ವೇಳೆ ದರ್ಶನ್ ಪರವಾಗಿ ರಾಜ್ಯ ಸರ್ಕಾರದ ಕೆಲವು ಸಚಿವರು ಎಸ್ ಪಿಪಿ ಪ್ರಸನ್ನ ಕುಮಾರ್ ಅವರನ್ನು ಬದಲಾವಣೆ ಮಾಡಲು ಒತ್ತಡ ಹಾಕಿದ್ದಾರೆ. ಅವರ ಒತ್ತಡಕ್ಕೆ ಮಣಿದು ಎಸ್ ಪಿಪಿ ಬದಲಾವಣೆ ಮಾಡಲಾಗುತ್ತದೆ ಎಂದು ಸುದ್ದಿಯಾಗಿತ್ತು.

ಇದಕ್ಕೆ ತಕ್ಕಂತೆ ಗೃಹಸಚಿವ ಜಿ ಪರಮೇಶ್ವರ್ ಕೂಡಾ ಬದಲಾವಣೆ ಮಾಡಿದರೂ ತಪ್ಪಿಲ್ಲ ಎಂದಿದ್ದರು. ಆದರೆ ಇದೀಗ ಈ ಎಲ್ಲಾ ರೂಮರ್ ಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ನಮಗೆ ಯಾರೂ ಒತ್ತಡ ಹಾಕಿಲ್ಲ. ಒತ್ತಡಗಳಿಗೆ ನಾವು ಮಣಿಯುವುದೂ ಇಲ್ಲ. ಎಸ್ ಪಿಪಿ ಬದಲಾವಣೆ ಪ್ರಸ್ತಾವನೆಯೇ ಆಗಿಲ್ಲ ಎಂದಿದ್ದಾರೆ.

ಈಗ ನಿಯೋಜನೆಗೊಂಡಿರುವ ಎಸ್ ಪಿಪಿ ಪ್ರಸನ್ನಕುಮಾರ್ ಅವರೇ ಕಾನೂನು ಪ್ರಕ್ರಿಯೆ ನಡೆಸಲಿದ್ದಾರೆ. ಅವರನ್ನು ಬದಲಾಯಿಸುವ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments