Webdunia - Bharat's app for daily news and videos

Install App

ಬಳ್ಳಾರಿ ಲೂಟಿ ಹೊಡೆದ ರೆಡ್ಡಿ ಪಟಾಲಂನನ್ನು ಓಡಿಸ್ಬೇಕು: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 8 ನವೆಂಬರ್ 2024 (13:34 IST)
ಬಳ್ಳಾರಿ: ಸಂಡೂರು ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯ ರೆಡ್ಡಿ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಲೂಟಿ ಹೊಡೆದಿರುವ ರೆಡ್ಡಿ ಪಟಾಲಂನನ್ನು ಇಲ್ಲಿಂದ ದೂರ ಓಡಿಸಬೇಕು ಎಂದಿದ್ದಾರೆ.

ನಿಮಗೆಲ್ಲಾ ಗೊತ್ತಿದೆ ಜನಾರ್ಧನ ರೆಡ್ಡಿ ಯಾರು ಏನು ಅಂತ ಎಲ್ಲಾ ಗೊತ್ತಿದೆ. ಜನಾರ್ಧನ ರೆಡ್ಡಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ಮಾಡಿಕೊಂಡಿದ್ದರು. ಅಕ್ರಮ ಗಣಿಗಾರಿಕೆ ಮಾಡಿ ಲೂಟಿ ಹೊಡೆದವರು. ಅವರು ಈಗ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೀವಿ ಎಂದು ಜವಾಬ್ಧಾರಿ ತೆಗೆದುಕೊಂಡಿದ್ದಾರೆ.

ದಯಮಾಡಿ ನೀವೆಲ್ಲಾ ಯೋಚನೆ ಮಾಡಬೇಕು. ನಾವೆಲ್ಲಾ ಯಾಕೆ ಪಾದಯಾತ್ರೆ ಮಾಡಿದ್ದೆವು. ಬೆಂಗಳೂರಿನಿಂದ ಬಳ್ಳಾರಿಯವರೆಗೆ ಜನಾರ್ಧನ ರೆಡ್ಡಿ ಮತ್ತು ಪಟಾಲಂ ಬಳ್ಳಾರಿ ಜಿಲ್ಲೆಯನ್ನು ಲೂಟಿ ಮಾಡ್ತಿದ್ದಾರೆ, ಹಫ್ತಾ ವಸೂಲಿ ಮಾಡಿ ಲೂಟಿ ಮಾಡ್ತಿದ್ದಾರೆ. ಇಲ್ಲಿ ಕಾನೂನಿಲ್ಲ. ಭಯದ ವಾತಾವರಣವಿದೆ. ನಿರುದ್ಯೋಗ, ಬಡತನವಿದೆ. ಇದಕ್ಕೆಲ್ಲಾ ಕಾರಣವಾದ ಜನಾರ್ಧನ ರೆಡ್ಡಿ ಮತ್ತು ಅವರ ಪಟಾಲಂ ಇಡೀ ಬಳ್ಳಾರಿ ಜಿಲ್ಲೆಯನ್ನು ಹಾಳು ಮಾಡಿದ್ದಾರೆ ಎಂದು ಪಾದಯಾತ್ರೆ ಮಾಡಿದ್ದೆವು.

ಬಳ್ಳಾರಿ ಜಿಲ್ಲೆಯನ್ನು ಭಯದ ವಾತಾವರಣದಲ್ಲಿಟ್ಟುಕೊಂಡಿದ್ದ ರೆಡ್ಡಿ ಸಹೋದರರ ಅಭ್ಯರ್ಥಿಯನ್ನು ಮತ್ತೆ ಗೆಲ್ಲಬೇಕಾ? ಮತ್ತೆ ನಿಮಗೆ ಅಂತಹ ವಾತಾವರಣ ಬೇಕಾ? ಅವರ ಸ್ವಾರ್ಥಕ್ಕೋಸ್ಕರ ಇಡೀ ಜಿಲ್ಲೆಯನ್ನು  ತಮ್ಮ ವಶ ಮಾಡಿಕೊಂಡಿದ್ದವರ ಹಿಡಿತಕ್ಕೆ ಜಿಲ್ಲೆ ಹೋಗಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments