ಸಾಲ ಮಾಡಿ ಬೆಂಗಳೂರು ಅಭಿವೃದ್ಧಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (14:17 IST)
ಬೆಂಗಳೂರು: ಮಳೆ ಬಂದ ಮೇಲೆ ಇದೇನಾ ಬ್ರ್ಯಾಂಡ್ ಬೆಂಗಳೂರು ಎಂದು ವಿಪಕ್ಷಗಳು, ನೆಟ್ಟಿಗರು ಟೀಕೆ ಮಾಡಿದ್ದೇ ಮಾಡಿದ್ದು. ಇದೀಗ ಸಿಎಂ ಸಿದ್ದರಾಮಯ್ಯ ಸಾಲ ಮಾಡಿ ಬೆಂಗಳೂರು ಅಭಿವೃದ್ಧಿ ಮಾಡಲು ಹೊರಟಿದ್ದಾರೆ.

3,000 ಕೋಟಿ ರೂ. ಸಾಲ ಮಾಡಿ ನಾವು ಬೆಂಗಳೂರನ್ನು ಅಭಿವೃದ್ಧಿ ಮಾಡಲಿದ್ದೇವೆ. ಬೆಂಗಳೂರಿನ ಮೂಲಭೂತ ಸೌಕರ್ಯಾಭಿವೃದ್ಧಿ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದಿನ ಸರ್ಕಾರಗಳು ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲು ವಿಫಲವಾಗಿದ್ದವು. ಈಗ ನಾವು ಸಾಲ ಮಾಡಿ ಅಭಿವೃದ್ಧಿ ಮಾಡಲಿದ್ದೇವೆ ಎಂದಿದ್ದಾರೆ.

ಬೆಂಗಳೂರು ಮಳೆ ಬಂದಾಗಲೆಲ್ಲಾ ರಸ್ತೆಗಳು ನೀರಿನಲ್ಲಿ ಮುಳುಗಿ ಹೋಗುತ್ತವೆ, ರಸ್ತೆ ಗುಂಡಿಗಳು ವಾಹನ ಸವಾರರ ಪಾಲಿಗೆ ಗಂಡಾಂತರ ತಂದಿಡುತ್ತದೆ. ಮಳೆ ಬಂದಾಗಲೇ ಇಂತಹ ಹಲವು ಸಮಸ್ಯೆಗಳು ಎಲ್ಲರ ಕಣ್ಣಿಗೆ ಬೀಳುತ್ತವೆ. ಇದೀಗ ಎಲ್ಲಾ ಸರಿಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವ ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಅಸ್ತ್ರವಾಗಲಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರ ಆರ್ಥಿಕ ಹೊರೆ ತಗ್ಗಿಸಲು ಹೆಣಗಾಡುತ್ತಿದೆ. ಇದರ ನಡುವೆ ಅಭಿವೃದ್ಧಿಗೆ ಹಣ ಹೊಂದಿಸಲು ಸಾಲದ ಮೊರೆ ಹೋಗಬೇಕಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments