Webdunia - Bharat's app for daily news and videos

Install App

ನಾನು ರಾಜೀನಾಮೆ ಕೊಡೋದಿಲ್ಲ ಅಂದ್ರೆ ಕೊಡೋದಿಲ್ಲ ಮೋದಿ ರಾಜೀನಾಮೆ ಕೊಡಬೇಕಿತ್ತು: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 26 ಸೆಪ್ಟಂಬರ್ 2024 (13:25 IST)
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿದರೂ ತಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸುತ್ತಿದ್ದಂತೇ ಬಿಜೆಪಿ ರಾಜೀನಾಮೆಗೆ ಒತ್ತಡ ಹೇರಿ ಪ್ರತಿಭಟನೆ ನಡೆಸುತ್ತಿದೆ. ತಮ್ಮ ವಿರುದ್ಧ ತನಿಖೆಗೆ ಆದೇಶಿಸುತ್ತಿದ್ದಂತೇ ಸಿದ್ದರಾಮಯ್ಯ ನಾನು ರಾಜೀನಾಮೆ ಕೊಡಲ್ಲ, ಬಿಜೆಪಿ-ಜೆಡಿಎಸ್ ಒತ್ತಡಕ್ಕೆ ಮಣಿಯಲ್ಲ ಎಂದಿದ್ದರು.

ಇಂದೂ ಬಿಜೆಪಿ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಮತ್ತೆ ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ರಾಜೀನಾಮೆ ಕೊಡ್ತೀರಾ ಎಂದು ಪ್ರಶ್ನೆ ಮಾಡಿದೆ. ಇದಕ್ಕೆ ಉತ್ತರಿಸಿರುವ ಸಿಎಂ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ನಾನು ಏನೂ ತಪ್ಪು ಮಾಡಿಲ್ಲ. ನಾನು ಯಾಕೆ ರಾಜೀನಾಮೆ ಕೊಡಲಿ ಎಂದು ಸಿದ್ದು ಪುನರುಚ್ಚರಿಸಿದ್ದಾರೆ.

‘ಮೊದಲು ಕುಮಾರಸ್ವಾಮಿಯವರು ರಾಜೀನಾಮೆ ಕೊಡ್ಲಿ. ಅವರ ಮೇಲೂ ಆಪಾದನೆಗಳಿಲ್ವಾ? ಅವರು ಎಲ್ಲಿ ಸಚಿವರಾಗಿರೋದು? ಯಾರು ಪ್ರಧಾನ ಮಂತ್ರಿ? ಯಾರ ಪಕ್ಷ ಅಧಿಕಾರದಲ್ಲಿರೋದು? ಮೊದಲು ಅವರು ರಾಜೀನಾಮೆ ಕೊಡಲಿ. ನಾನು ಏನೂ ತಪ್ಪು ಮಾಡಿಲ್ಲ. ನಾನ್ಯಾಕೆ ಕೊಡಲಿ ರಾಜೀನಾಮೆಯಾ? ಈ ಹಿಂದೆ ಮೋದಿ ರಾಜೀನಾಮೆ ಕೊಟ್ಟಿದ್ರಾ? ಅವರು ಮುಖ್ಯಮಂತ್ರಿಯಾಗಿದ್ದಾಗ ನೂರಾರು ಜನ ಸಾವನ್ನಪ್ಪಿದ್ದರು. ಆಗಲೂ ರಾಜೀನಾಮೆ ಕೊಟ್ಟಿಲ್ಲ. ಈಗ ನಾನು ಯಾಕೆ ಕೊಡಲಿ’ ಎಂದು ಸಿದ್ದು ಗರಂ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments