ಸಿಎಂ ಸಿದ್ದರಾಮಯ್ಯ, ಶಿವಕುಮಾರ್‌ ಸಾಲಿನಲ್ಲೇ ಕೂತು ಸೆಲ್ಫಿ ತೆಗೆಸಿಕೊಂಡ ರೌಡಿಶೀಟರ್‌

Sampriya
ಭಾನುವಾರ, 13 ಅಕ್ಟೋಬರ್ 2024 (16:31 IST)
Photo Courtesy X
ಬೆಂಗಳೂರು: ಮೈಸೂರು ದಸರಾ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರ ಸಾಲಿನಲ್ಲೇ ರೌಡಿಶೀಟರ್‌ ಪ್ರಕಾಶ ಮುಧೋಳ  ಕೂರಿಸಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

 ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿ ಅವರನ್ನು ಹೆದರಿಸಿ ₹1 ಕೋಟಿ ಹಣ ವಸೂಲು ಮಾಡಿದ್ದಲ್ಲದೆ ರೌಡಿಶೀಟರ್ ಪ್ರಕಾಶ ಮುಧೋಳ ವಿರುದ್ಧ ಸುನಾರು 11 ಪ್ರಕರಣ ದಾಖಲಾಗಿದೆ.  ಇದೀಗ ಗಣ್ಯರ ಸಾಲಿನಲ್ಲಿ ರೌಡಿಶೀಟರ್‌ಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಬಿಜೆಪಿ ನಾಯಕರು, ಬಾಗಲಕೋಟೆ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, MLC ಯತೀಂದ್ರ ಜೊತೆಗೂ ಪ್ರಕಾಶ್‌ ಮುಧೋಳ ಸೆಲ್ಫಿ ತೆಗೆದುಕೊಂಡಿದ್ದಾರೆ. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಹಾಕುತ್ತಿದ್ದಾರೆ.

ಇತ್ತೀಚೆಗಷ್ಟೇ ಬಾಗಲಕೋಟೆ ತಾಲೂಕಿನ ಸೀಮಿಕೇರಿ ರಾಮಾರೂಢ ಮಠದ ಪರಮರಾಮಾರೂಢಶ್ರೀಗೆ ರೌಡಿಶೀಟರ್​ ಪ್ರಕಾಶ್ ಮುಧೋಳ ಬೆದರಿಕೆ ಹಾಕಿ 1 ಕೋಟಿ ರೂ. ವಸೂಲಿ ‌ಮಾಡಿದ್ದ. ಎಡಿಜಿಪಿ, ಐಜಿಪಿ ಹೆಸರಲ್ಲಿ ಕರೆ ಮಾಡಿ ವಂಚನೆ ಮಾಡಿದ್ದ. ಈ ಸಂಬಂಧ ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಪ್ರಕಾಶ್​ನನ್ನು​​ ಬಂಧಿಸಿದ್ದರು. ಸದ್ಯ 4 ದಿನದ ಹಿಂದೆ ಪ್ರಕಾಶ್ ‌ಮುಧೋಳ ಜಾಮೀನಿನ ಮೇಲೆ ಹೊರ ಬಂದಿದ್ದಾನೆ. ಇದೀಗ ದಸರಾ ಕಾರ್ಯಕ್ರಮದಲ್ಲಿ ಗಣ್ಯರ ವೇದಿಕೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments