Webdunia - Bharat's app for daily news and videos

Install App

ಆರ್ಥಿಕ ಪ್ರಗತಿ ಎಂದ ಸಿಎಂ ಸಿದ್ದರಾಮಯ್ಯಗೆ ಮೊದಲು ಬೆಂಗಳೂರು ರಸ್ತೆ ಗುಂಡಿ ಮುಚ್ಚಿ ಎಂದ ಜನ

Krishnaveni K
ಮಂಗಳವಾರ, 22 ಅಕ್ಟೋಬರ್ 2024 (08:45 IST)
ಬೆಂಗಳೂರು: ಕರ್ನಾಟಕದ ಆರ್ಥಿಕ ಪ್ರಗತಿ ದೇಶದ ಆರ್ಥಿಕ ಪ್ರಗತಿಗಿಂತಲೂ ಹೆಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ಜನ ಮೊದಲು ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಆರ್ಥಿಕತೆಯ ನಿರ್ವಹಣೆಯ ಫಲವಾಗಿ ನಮ್ಮ ರಾಜ್ಯದ ಜಿಡಿಪಿ ದರ ದೇಶದ ಜಿಡಿಪಿ ದರಕ್ಕಿಂತಲೂ ವೇಗವಾಗಿ ಬೆಳೆದಿದೆ. ದೇಶದ ಜಿಡಿಪಿ ದರ 8.2% ಇದ್ದರೆ ಕರ್ನಾಟಕದ ಜಿಡಿಪಿ ದರ 10.2% ರಷ್ಟಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಜನ ಮೊದಲು ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಂಗಳೂರಿನ ರಸ್ತೆಗಳು ಹಳ್ಳದಂತಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ವಾಹನಗಳು ಓಡಾಡಲು ಡೇಂಜರ್ ಎನ್ನುವ ಪರಿಸ್ಥಿತಿಯಿದೆ.

ಈ ನಡುವೆ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಈಗ ಸಿದ್ದರಾಮಯ್ಯ ಆರ್ಥಿಕತೆಯ ಪ್ರಗತಿ ಬಗ್ಗೆ ಮಾತನಾಡಿದರೆ ಜನ ರಸ್ತೆಗಳನ್ನೇ ಸರಿಪಡಿಸಲು ಸಾಧ್ಯವಾಗಿಲ್ಲ. ಇನ್ನು, ಆರ್ಥಿಕ ಪ್ರಗತಿ ಎಲ್ಲಿಂದ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments