Webdunia - Bharat's app for daily news and videos

Install App

ಮಹಿಳೆಯರ ಪರ ಭಾಷಣ ಮಾಡುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಕಿಡಿ

Webdunia
ಮಂಗಳವಾರ, 21 ಮಾರ್ಚ್ 2017 (12:49 IST)
ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ನೇಮಕವಾಗಿದ್ದು, ಇದು ಕೇಂದ್ರದ ಅನುದಾನಿತ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದ ಆರಂಭದಲ್ಲಿ ಕೇಂದ್ರ ಸರ್ಕಾರ ಶೇ.90ರಷ್ಟು ಮತ್ತು ರಾಜ್ಯ ಸರ್ಕಾರ ಶೇ.10ರಷ್ಟು ವೇತನ ನೀಡುತ್ತಿತ್ತು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈ ಅನುಪಾತವನ್ನ ಬದಲಾಯಿಸಿದ್ದು, ಶೇ. 60ರಷ್ಟು ಕೇಂದ್ರ ಮತ್ತು 40 ರಷ್ಟನ್ನ ರಾಜ್ಯಕ್ಕೆ ನೀಡಿದೆ. ಆದರೂ, ಸರ್ಕಾರ ಪ್ರತೀ ವರ್ಷ ವೇತನ ಹೆಚ್ಚಳ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಮಹಿಳೆ ಮತ್ತು ಮಕ್ಕಳ ಕಾಳಜಿ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ. ಅನುಪಾತ ಬದಲಿಸಿದ ಬಗ್ಗೆ ಕೇಂದ್ರಸರ್ಕಾರವನ್ನ ಪ್ರಶ್ನಿಸಲಿ ಎಂದು ಕಿಡಿ ಕಾರಿದ್ದಾರೆ. ಸದ್ಯ ರಾಜ್ಯಸರ್ಕಾರ 5200 ರೂ. ನೀಡುತ್ತಿದ್ದು, ಕೆಂದ್ರ ಕೇವಲ 1800 ರೂ. ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅನುಪಾತ ಬದಲಿಸುವ ಮೂಲಕ ಕೆಂದ್ರ ಸರ್ಕಾರ ತಪ್ಪು ಮಾಡಿದೆ, ಆದರೆ, ಬಿಜೆಪಿಯವರು ರಾಜ್ಯಸರ್ಕಾರವನ್ನ ದೂಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ಸಿಎಂ ಸುಳ್ಳು ಹೇಳುತ್ತಿದ್ದಾರೆ ಎಂದ ಶೆಟ್ಟರ್ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ನಿಮ್ಮ ಬಂಡವಾಳ ಬಯಲಾಯ್ತು, ಥೂ ನಿಮಗೆ ನಾಚಿಕೆ ಆಗಬೇಕು ಎಂದು ಸಿದ್ದರಾಮಯ್ಯ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.  ಸಿಎಂ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments