ರಾಜ್ಯೋತ್ಸವ ಭಾಷಣದಲ್ಲೂ ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Krishnaveni K
ಶುಕ್ರವಾರ, 1 ನವೆಂಬರ್ 2024 (12:32 IST)
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲೂ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

69 ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ಕಂಠೀರವ ಸ್ಟೇಡಿಯಂನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು ಟೀಕೆಗೆ ಗುರಿಯಾಗಿತ್ತು.

ಇಂದು ಭಾಷಣ ಮಾಡಿದ ಅವರು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. 15 ನೇ ಹಣಕಾಸು ಆಯೋಗದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಯಿತು. ಕರ್ನಾಟಕಕ್ಕೆ ಸರಿಯಾಗಿ ತೆರಿಗೆ ಅನುದಾನ ಹಂಚಿಕೆಯಾಗುತ್ತಿಲ್ಲ. ಈ ಅನ್ಯಾಯದ ವಿರುದ್ಧ ಕನ್ನಡಿಗರು ಧ್ವನಿಯೆತ್ತಬೇಕು. ನಾವು ರಾಜ್ಯಕ್ಕೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ. ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳುವ ಕೆಲಸವಾಗಬೇಕಿದೆ. ರಾಜ್ಯದಿಂದ ಆಯ್ಕೆಯಾದ ಸಂಸದರು ಈ ಬಗ್ಗೆ ಧ್ವನಿಯೆತ್ತಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ಇನ್ನು, ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಕರ್ನಾಟಕ ಮತ್ತು ಕನ್ನಡದ ಬಗ್ಗೆ ಅನ್ಯಭಾಷಿಕರಿಂದ ಅವಮಾನ ಮಾಡುವ ಚಾಳಿ ಹೆಚ್ಚಾಗುತ್ತಿದೆ. ಇದು ನಾಡದ್ರೋಹವಾಗಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments