Select Your Language

Notifications

webdunia
webdunia
webdunia
webdunia

ಚುನಾವಣಾ ಪ್ರಚಾರ ಕಣಕ್ಕಿಳಿದ ಸಿಎಂ ಪುತ್ರ ಯತೀಂದ್ರ

ಚುನಾವಣಾ ಪ್ರಚಾರ ಕಣಕ್ಕಿಳಿದ ಸಿಎಂ ಪುತ್ರ ಯತೀಂದ್ರ
ನಂಜನಗೂಡು , ಶುಕ್ರವಾರ, 24 ಮಾರ್ಚ್ 2017 (15:37 IST)
ಉಪಚುನಾವಣಾ ಪ್ರಚಾರ ರಂಗೇರುತ್ತಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ್ದಾರೆ.
ಅಭ್ಯರ್ಥಿ ಕಳಲೆ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ ಅವರು ತಾಲೂಕಿನ ಮೊತ್ತ, ಹುಚ್ಗಣಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು.
 
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗೀತಾ ಮಹಾದೇವ ಪ್ರಸಾದ್ ಪರ ಕೂಡಾ ಡಾ.ಯತೀಂದ್ರ ಮತಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರ ಮೂಲಗಳು ತಿಳಿಸಿವೆ.
 
ಡಾ.ಯತೀಂದ್ರ ಅವರೊಂದಿಗೆ ಸಂಸದ ಧೃವನಾರಾಯಣ ಸೇರಿದಂತೆ ಇನ್ನಿತರ ಹಿರಿಯ ಮುಖಂಡರು ಉಪಸ್ಥಿತರಿದ್ದರು ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸಿ.ಪಿ. ಯೋಗೀಶ್ವರ್ ಬ್ಯಾಂಕ್ ಅಕೌಂಟಿಗೆ ಕನ್ನ