Select Your Language

Notifications

webdunia
webdunia
webdunia
webdunia

ಸಿಎಂ ಪುತ್ರ ರಾಕೇಶ್ ಅವರಿಗೆ ಅನಾರೋಗ್ಯ: ಬೆಲ್ಜಿಯಂಗೆ ವೈದ್ಯರ ತಂಡ

ಸಿಎಂ ಪುತ್ರ ರಾಕೇಶ್ ಅವರಿಗೆ ಅನಾರೋಗ್ಯ: ಬೆಲ್ಜಿಯಂಗೆ ವೈದ್ಯರ ತಂಡ
ಬೆಂಗಳೂರು , ಬುಧವಾರ, 27 ಜುಲೈ 2016 (11:18 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಚಿಕಿತ್ಸೆಗೆ ಇಬ್ಬರು ವೈದ್ಯರ ತಂಡವನ್ನು ವಿದೇಶಕ್ಕೆ ಕಳುಹಿಸಲು ತಯಾರಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರು ಬೆಲ್ಜಿಯಂ ಪ್ರವಾಸದಲ್ಲಿದ್ದು, ಪ್ಯಾಂಕ್ರಿಯಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಚಿಕಿತ್ಸೆಗಾಗಿ ಬೆಂಗಳೂರಿನಿಂದ ವೈದ್ಯರ ತಂಡವನ್ನು ಬೆಲ್ಜಿಯಂಗೆ ರವಾನೆ ಮಾಡಲು ಸರಕಾರ ಸಿದ್ಧತೆ ನಡೆಸಿದೆ. ವೈದ್ಯರ ತಂಡದೊಂದಿಗೆ ಸಿದ್ದರಾಮಯ್ಯನವರ ಪತ್ನಿ ಕೂಡಾ ಬೆಲ್ಜಿಯಂಗೆ ತೆರಳಿ ಪುತ್ರನ ಆರೋಗ್ಯ ನೋಡಿಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.
 
ಬೆಲ್ಜಿಯಂ ಪ್ರವಾಸದಲ್ಲಿರುವ ಪುತ್ರನ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿ, ಪುತ್ರನ ಅನಾರೋಗ್ಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕರೆಗೆ ಸ್ಪಂಧಿಸಿರುವ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ರಾಕೇಶ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಬಸ್‌ಗೆ ಬೆಂಕಿ: ಮೂವರ ಸಜೀವ ದಹನ!