Select Your Language

Notifications

webdunia
webdunia
webdunia
webdunia

ಸಿಎಂ ಜೇಷ್ಠಪುತ್ರ ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಚಿವ ಅಂಬರೀಶ್

ಸಿಎಂ ಜೇಷ್ಠಪುತ್ರ ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಚಿವ ಅಂಬರೀಶ್
ಬೆಂಗಳೂರು , ಭಾನುವಾರ, 31 ಜುಲೈ 2016 (14:40 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ನಿಧನದ ಸುದ್ದಿ ಅತ್ಯಂತ ನೋವು ತಂದಿದೆ ಎಂದು ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ವಿಷಾದ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಬೇರೆ, ಮಾನವೀಯತೆ ಬೇರೆ. ಸಿಎಂ ಸುಪುತ್ರ ರಾಕೇಶ್ ಸಿದ್ದರಾಮಯ್ಯ ನನ್ನನ್ನು ಅಂಕಲ್ ಎಂದು ಕರೆಯುತ್ತಿದ್ದ. ಅವನು ನನ್ನ ಮಗನಂತೆ ಇದ್ದ. ರಾಕೇಶ್ ನಿಧನದ ಸುದ್ದಿ ಅತ್ಯಂತ ನೋವು ತಂದಿದೆ ಎಂದು ಸಂತಾಪ ಸೂಚಿಸಿದರು.
 
ರಾಕೇಶ್ ಸಿದ್ದರಾಮಯ್ಯ ವಿದೇಶಕ್ಕೆ ತೆರಳುವ ಮುಂಚೆ ಪಾರ್ಟಿ ಆಯೋಜಿಸಿದ್ದರು. ನಾನು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಅವರು ಸಿಎಂ ಪುತ್ರನಾದರು ಅವರಲ್ಲಿ ಯಾವುದೇ ಅಹಂ ಇರಲಿಲ್ಲ. ಆತ ಒಳ್ಳೆಯ ಹುಡುಗ. ಎಲ್ಲರಿಗೂ ಸಹಾಯ ಮಾಡುವಂತಹ ವ್ಯಕ್ತಿತ್ವ ಹೊಂದಿದ್ದರು ಎಂದು ಹೇಳಿದರು. ರಾಕೇಶ್ ಅವರ ಕುಟುಂಬ ವರ್ಗಕ್ಕೆ ದೇವರು ದುಃಖ ಬರಿಸುವ ಶಕ್ತಿ ನೀಡಲಿ ಎಂದು ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಪ್ರಾರ್ಥಿಸಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಠಿ ಮೂಲಕ ಚಳುವಳಿ ಧಮನಿಸುವ ಕೆಲಸ ಮಾಡಬಾರದು: ಮಲ್ಲಿಕಾರ್ಜುನ್ ಖರ್ಗೆ