Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್: ಸಿಎಂ ಸಿದ್ದರಾಮಯ್ಯ ಲಾಬಿ?

Webdunia
ಗುರುವಾರ, 20 ಏಪ್ರಿಲ್ 2017 (13:16 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್ ಅವರನ್ನು ನೇಮಕ ಮಾಡುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿದ್ದರಾಮಯ್ಯ ಏಪ್ರಿಲ್ 23 ರಂದು ದೆಹಲಿಗೆ ತೆರಳುತ್ತಿದ್ದು ಎಸ್‌.ಆರ್.ಪಾಟೀಲ್ ಪರ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಎಸ್.ಆರ್.ಪಾಟೀಲ್ ಪ್ರಬಲ ಲಿಂಗಾಯುತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಆಯ್ಕೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎನ್ನಲಾಗುತ್ತಿದೆ.
 
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹೈಕಮಾಂಡ್ ಆದೇಶ ನೀಡಿದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಇರಾದೆಯನ್ನು ಜಿ.ಪರಮೇಶ್ವರ್ ಈಗಾಗಲೇ ವ್ಯಕ್ತಪಡಿಸಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ತಮ್ಮ ಬಣದ ವ್ಯಕ್ತಿ ಕೆಪಿಸಿಸಿ ಅಧ್ಯಕ್ಷರಾಗಿದ್ದಲ್ಲಿ ಸಿಎಂ ಆಯ್ಕೆ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರ ಸಿಎಂ ಸಿದ್ದರಾಮಯ್ಯ ಹಾಕಿರಬಹುದು ಎನ್ನುವ ವರದಿಗಳು ಹರಿದಾಡುತ್ತಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments