Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಜೈಲಿಗೆ ಹೋಗುವುದನ್ನ ತಪ್ಪಿಸಿಕೊಳ್ಲಲಿ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ
ಯಡಿಯೂರಪ್ಪ ಮೊದಲು ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲಿ, ಆಮೇಲೆ ನಮ್ಮನ್ನ ಜೈಲಿಗೆ ಕಳುಹಿಸುವುದರ ಬಗ್ಗೆ ಮಾತನಾಡಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಫ್ರೀಡಂ ಪಾರ್ಕ್`ನಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ 6-7 ತಿಂಗಳು ಮಾತ್ರ ನಿಮ್ಮ ಸರ್ಕಾರದ ಅಧಿಕಾರಾವಧಿ ಇರುತ್ತೆ. ಆ ಬಳಿಕ ನಿಮ್ಮನ್ನ ಸೆಂಟ್ರಲ್ ಜೈಲಿನಲ್ಲಿಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದ ಯಡಿಯೂರಪ್ಪ ಮಾತಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ ತಾನೇ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೈದಿದ್ದಾರೆ. ಇದರಿಂದ ಹತಾಶರಾಗಿರುವ ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದೇವೇಳೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದೇನೆ ಎಂದು ತಿಳಿಸಿದ ಸಿಎಂ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿಗೇ ಕೈ ಕೊಟ್ಟ ಆಪ್ತ