ಬಿಜೆಪಿಯಲ್ಲೇ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ: ಸಿಎಂ

Webdunia
ಬುಧವಾರ, 8 ನವೆಂಬರ್ 2017 (14:17 IST)
ಬಿಜೆಪಿಯಲ್ಲೇ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ. ಪರಸ್ಪರರು ಆರೋಪ ಪ್ರತ್ಯಾರೋಪಗಳಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರಾಳ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಲ್ಲಿ ಪರಸ್ಪರರಲ್ಲಿ ದ್ವೇಷವಿದೆ. ಬಿಜೆಪಿ ಮುಖಂಡ ಸೊಗಡು ಶಿವಣ್ಣ, ಪರಿವರ್ತನಾ ಯಾತ್ರೆಗೆ ಹಣ ನೀಡಿ ಜನರನ್ನು ಕರೆತರಲಾಗುತ್ತಿದೆ ಎಂದು ಹೇಳಿದ್ದಾರೆ. ಯಾತ್ರೆಯಲ್ಲಿ ಸೀರೆ, ಹಣ ಹಂಚಿಕೆ ಮಾಡಲಾಗುತ್ತಿದೆ. ಇಂತಹ ಹೀನಾಯ ಸ್ಥಿತಿ ಬಿಜೆಪಿಗೆ ಬರಬಾರದಿತ್ತು ಎಂದು ವ್ಯಂಗ್ಯವಾಡಿದರು.  
 
ನೋಟ್ ಬ್ಯಾನ್ ನಿಷೇಧಗೊಳಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕರಾಳ ದಿನಾಚರಣೆ ಆಚರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸರ್ವಾಧಿಕಾರಿಗಳು ಎಂದು ವಾಗ್ದಾಳಿ ನಡೆಸಿದರು.
 
ದೇಶದಲ್ಲಿ ಆರ್ಥಿಕತೆ ಕುಸಿಯತೊಡಗಿದೆ. ನಿರುದ್ಯೋಗ ಸಮಸ್ಯೆ ಗಗನಕ್ಕೆ ಏರಿದೆ. ಇದಕ್ಕೆಲ್ಲಾ ಪ್ರಧಾನಿ ನೋಟ್ ಬ್ಯಾನ್ ಮಾಡಿರುವುದೇ ಮೂಲಕಾರಣವಾಗಿದೆ ಎಂದು ಕಿಡಿಕಾರಿದ್ಗಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಬ್ಬರು ಜೈಲಿಗೆ ಹೋಗಿ ಬಂದವರು. ಜೈಲಿಗೆ ಹೋಗಿ ಬಂದವರು ನಮ್ಮದು ಭ್ರಷ್ಟ ಸರಕಾರವೆನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments