Webdunia - Bharat's app for daily news and videos

Install App

ಜಾರ್ಜ್ ಕೊಲೆಗಡುಕ ಅಂದ್ರೂ ಸುಮ್ಮನಿರಬೇಕಾ?: ಸಿಎಂ ಗುಡುಗು

Webdunia
ಸೋಮವಾರ, 13 ನವೆಂಬರ್ 2017 (16:57 IST)
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್‌ರನ್ನು ಬಿಜೆಪಿ ನಾಯಕರು ಕೊಲೆಗಡುಕ ಎಂದರೂ ಸುಮ್ಮನಿರಬೇಕಾ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲಿ ಗುಡುಗಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಜಾರ್ಜ್‌ರನ್ನು ಕೊಲೆಗಡುಕ ಎಂದು ಹೇಳಿದೆಯಾ? ಹೇಳಿಲ್ಲ ಅಂದ ಮೇಲೆ ಬಿಜೆಪಿ ನಾಯಕರು ಯಾಕೆ ಅಂತಹ ಪದವನ್ನು ಬಳಕೆ ಮಾಡುವುದು ಎಂದು ಕಿಡಿಕಾರಿದ್ದಾರೆ.
 
ನಿಲುವಳಿ ಸೂಚನೆಗೆ ಇದು ಯೋಗ್ಯ ವಿಷಯವಲ್ಲ. ನಿಯಮಗಳ ಪ್ರಕಾರವು ಇದು ಚರ್ಚೆಗೆ ತಕ್ಕ ವಿಷಯವಲ್ಲ. ಅಧಿಕಾರದಲ್ಲಿರುವ ಅನೇಕ ರಾಜಕಾರಣಿಗಳ ಮೇಲೆ ಎಫ್‌ಐಆರ್ ಆಗಿವೆ. ಆದರೆ ಯಾರೂ ರಾಜೀನಾಮೆ ನೀಡಿಲ್ಲ. ಹಾಗಾಗಿ ಜಾರ್ಜ್ ಕೂಡಾ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
 
ಹಿಂದೆ ಸಿಐಡಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ ಬಿಜೆಪಿ ನಾಯಕರ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಿದ್ದನ್ನು ಮರೆಯಬೇಡಿ ಎಂದು ತಿಳಿಸಿದರು.  .
 
ಸದನ ಸುಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಧರಣಿಯನ್ನು ಹಿಂಪಡೆಯಿರಿ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ ಘಟನೆ ನಡೆಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments