ಜಾರ್ಜ್ ಕೊಲೆಗಡುಕ ಅಂದ್ರೂ ಸುಮ್ಮನಿರಬೇಕಾ?: ಸಿಎಂ ಗುಡುಗು

Webdunia
ಸೋಮವಾರ, 13 ನವೆಂಬರ್ 2017 (16:57 IST)
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್‌ರನ್ನು ಬಿಜೆಪಿ ನಾಯಕರು ಕೊಲೆಗಡುಕ ಎಂದರೂ ಸುಮ್ಮನಿರಬೇಕಾ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲಿ ಗುಡುಗಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಜಾರ್ಜ್‌ರನ್ನು ಕೊಲೆಗಡುಕ ಎಂದು ಹೇಳಿದೆಯಾ? ಹೇಳಿಲ್ಲ ಅಂದ ಮೇಲೆ ಬಿಜೆಪಿ ನಾಯಕರು ಯಾಕೆ ಅಂತಹ ಪದವನ್ನು ಬಳಕೆ ಮಾಡುವುದು ಎಂದು ಕಿಡಿಕಾರಿದ್ದಾರೆ.
 
ನಿಲುವಳಿ ಸೂಚನೆಗೆ ಇದು ಯೋಗ್ಯ ವಿಷಯವಲ್ಲ. ನಿಯಮಗಳ ಪ್ರಕಾರವು ಇದು ಚರ್ಚೆಗೆ ತಕ್ಕ ವಿಷಯವಲ್ಲ. ಅಧಿಕಾರದಲ್ಲಿರುವ ಅನೇಕ ರಾಜಕಾರಣಿಗಳ ಮೇಲೆ ಎಫ್‌ಐಆರ್ ಆಗಿವೆ. ಆದರೆ ಯಾರೂ ರಾಜೀನಾಮೆ ನೀಡಿಲ್ಲ. ಹಾಗಾಗಿ ಜಾರ್ಜ್ ಕೂಡಾ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
 
ಹಿಂದೆ ಸಿಐಡಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ ಬಿಜೆಪಿ ನಾಯಕರ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಿದ್ದನ್ನು ಮರೆಯಬೇಡಿ ಎಂದು ತಿಳಿಸಿದರು.  .
 
ಸದನ ಸುಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಧರಣಿಯನ್ನು ಹಿಂಪಡೆಯಿರಿ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ ಘಟನೆ ನಡೆಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments