Webdunia - Bharat's app for daily news and videos

Install App

ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಬರಗಾಲವಿರುವುದು ಗೊತ್ತಿಲ್ಲವೇ?: ಈಶ್ವರಪ್ಪಗೆ ಸಿಎಂ ತಿರುಗೇಟು

Webdunia
ಸೋಮವಾರ, 15 ಮೇ 2017 (13:09 IST)
ರಾಜ್ಯದಲ್ಲಿ ಬರಗಾಲವಿರುವುದು ಬಿಜೆಪಿಯವರಿಗೆ ತಿಳಿದಿರಲಿಲ್ಲವೇ? ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಎಂದು ಸಿಂ ಸಿದ್ದರಾಮಯ್ಯ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಎಸಿ ರೂಮ್‌ನಲ್ಲಿ ಕುಳಿತುಕೊಂಡು ಆದೇಶ ಮಾಡಿದರೆ ಬರಗಾಲ ನೀಗದು. ಹಳ್ಳಿ ಹಳ್ಳಿಗಳಲ್ಲಿ ಪ್ರವಾಸ ಮಾಡಿದಾಗ ಅಧಿಕಾರಿಗಳು ಕರ್ತವ್ಯನಿರ್ವಹಣೆಗೆ ಮುಂದಾಗುತ್ತಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದರು. 
 
ಬರಗಾಲದ ಪರಿಹಾರ ಅನುದಾನ ಬಿಡಗಡೆ ಮಾಡಲಾಗಿದೆ. ಬರಗಾಲ ನಿರ್ವಹಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲಾ ಮುಗಿದ ಮೇಲೆ ಬಿಜೆಪಿಯವರು ರಾಜ್ಯಪ್ರವಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಮೊದಲು ನಿಮ್ಮ ಮನೆಯನ್ನು ಸರಿಮಾಡಿಕೊಳ್ಳಿ. ನಿಮ್ಮಲ್ಲೇ ಬರಗಾಲ ಪ್ರವಾಸ ಕುರಿತಂತೆ ಭಿನ್ನಮತ ಉಲ್ಬಣವಾಗಿದೆ. ನಂತರ ಸರಕಾರದ ಬಗ್ಗೆ ಹೇಳಿಕೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments