Webdunia - Bharat's app for daily news and videos

Install App

ಜಾರಕಿಹೊಳಿ ಸಹೋದರರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

Webdunia
ಸೋಮವಾರ, 22 ಮೇ 2017 (15:45 IST)
ನಿಮ್ಮ ಕಚ್ಚಾಟದಿಂದ ಬೆಳಗಾವಿ ಮೇಯರ್ ಗಾದಿ ತಪ್ಪಿದೆ ಎಂದು ಜಾರಕಿಹೊಳಿ ಸಹೋದರರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
 
ನಿಮ್ಮ ಭಿನ್ನಮತದಿಂದಾಗಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಅನ್ಯಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಒಂದು ವೇಳೆ, ಹೀಗಾದಲ್ಲಿ ನಿಮಗೂ ನಷ್ಟ, ಪಕ್ಷಕ್ಕೂ ನಷ್ಟವಾಗಲಿದೆ ಎಂದು ಖಾರವಾಗಿ ನುಡಿದಿದ್ದಾರೆ.
 
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಮುಂದಿನ ವರ್ಷದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಪ್ರತಿಯೊಬ್ಬರು ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
 
ಬೆಳಗಾವಿ ಜಿಲ್ಲೆಯ ನಾಯಕರಲ್ಲಿ ಯಾವುದೇ ವಿಷಯದ ಬಗ್ಗೆ ಅಸಮಾಧಾನವಿದ್ದಲ್ಲಿ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಾಕೀತು ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments