Webdunia - Bharat's app for daily news and videos

Install App

ಮೋದಿದು ಮನ್ ಕೀ ಬಾತ್, ನಮ್ದು ಕಾಮ್ ಕೀ ಬಾತ್: ಸಿಎಂ ವಾಗ್ದಾಳಿ

Webdunia
ಶನಿವಾರ, 23 ಸೆಪ್ಟಂಬರ್ 2017 (13:58 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ನಮ್ಮದು ಕಾಮ್ ಕೀ ಬಾತ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹೇಳಿಕೊಳ್ಳೋಕೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೇಳುತ್ತಾರೆ. ಆದರೆ, ನಿಜವಾಗಿ  ಬಂಡವಾಳಶಾಹಿಗಳಿಗೆ ಮಾತ್ರ ಸಾಥ್ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
 
ನಿಜವಾದ ಅರ್ಥದಲ್ಲಿ ಎಲ್ಲರಿಗೂ ಸಾಥ್ ನೀಡಿದವರು ನಾವು. ರಾಜ್ಯದಲ್ಲಿ ಎಲ್ರಿಗೂ ಒಂದಾದ್ರೂ ಕಾರ್ಯಕ್ರಮ ನಾವು ನೀಡಿದ್ದೇವೆ. ಮೋದಿ ಸರಕಾರ ಏನು ಮಾಡಿದೆ ಎಂದು ಗುಡುಗಿದರು. 
 
ಕಳೆದ ವರ್ಷ ನೋಟ್ ಬ್ಯಾನ್ ಜಾರಿಗೊಳಿಸಿ ದೇಶದ ಆರ್ಥಿಕತೆಯನ್ನು ಅಲ್ಲೋಲ ಕಲ್ಲೋಲ ಮಾಡಿದರು. ಇವತ್ತು ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದು ಮೋದಿ ಸರಕಾರದ ಕೊಡುಗೆ ಎಂದು ವ್ಯಂಗ್ಯವಾಡಿದರು.
 
ರಾಜ್ಯದಲ್ಲಿ ರೈತರ ಸಹಕಾರಿ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಮೋದಿ ಸರಕಾರ ಹಿಂದೇಟು ಹಾಕುತ್ತಿದೆ. ಬಂಡವಾಳಶಾಹಿಗಳ ಸಾಲ ಮನ್ನಾ ಮಾಡಿದ ಸರಕಾರಕ್ಕೆ ರೈತರ ಸಾಲ ಹೊರೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments