Webdunia - Bharat's app for daily news and videos

Install App

ಮೋದಿದು ಮನ್ ಕೀ ಬಾತ್, ನಮ್ದು ಕಾಮ್ ಕೀ ಬಾತ್: ಸಿಎಂ ವಾಗ್ದಾಳಿ

Webdunia
ಶನಿವಾರ, 23 ಸೆಪ್ಟಂಬರ್ 2017 (13:58 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ನಮ್ಮದು ಕಾಮ್ ಕೀ ಬಾತ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹೇಳಿಕೊಳ್ಳೋಕೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೇಳುತ್ತಾರೆ. ಆದರೆ, ನಿಜವಾಗಿ  ಬಂಡವಾಳಶಾಹಿಗಳಿಗೆ ಮಾತ್ರ ಸಾಥ್ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
 
ನಿಜವಾದ ಅರ್ಥದಲ್ಲಿ ಎಲ್ಲರಿಗೂ ಸಾಥ್ ನೀಡಿದವರು ನಾವು. ರಾಜ್ಯದಲ್ಲಿ ಎಲ್ರಿಗೂ ಒಂದಾದ್ರೂ ಕಾರ್ಯಕ್ರಮ ನಾವು ನೀಡಿದ್ದೇವೆ. ಮೋದಿ ಸರಕಾರ ಏನು ಮಾಡಿದೆ ಎಂದು ಗುಡುಗಿದರು. 
 
ಕಳೆದ ವರ್ಷ ನೋಟ್ ಬ್ಯಾನ್ ಜಾರಿಗೊಳಿಸಿ ದೇಶದ ಆರ್ಥಿಕತೆಯನ್ನು ಅಲ್ಲೋಲ ಕಲ್ಲೋಲ ಮಾಡಿದರು. ಇವತ್ತು ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದು ಮೋದಿ ಸರಕಾರದ ಕೊಡುಗೆ ಎಂದು ವ್ಯಂಗ್ಯವಾಡಿದರು.
 
ರಾಜ್ಯದಲ್ಲಿ ರೈತರ ಸಹಕಾರಿ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಮೋದಿ ಸರಕಾರ ಹಿಂದೇಟು ಹಾಕುತ್ತಿದೆ. ಬಂಡವಾಳಶಾಹಿಗಳ ಸಾಲ ಮನ್ನಾ ಮಾಡಿದ ಸರಕಾರಕ್ಕೆ ರೈತರ ಸಾಲ ಹೊರೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments