ಉದ್ಯಮಿಗಳ ಸಾಲ ಮನ್ನಾ ಮಾಡಿದ ಮೋದಿ, ರೈತರ ಸಾಲ ಯಾಕೆ ಮನ್ನಾ ಮಾಡಲ್ಲ: ಸಿಎಂ ಆಕ್ರೋಶ

Webdunia
ಗುರುವಾರ, 3 ಮೇ 2018 (16:53 IST)
ಕೇಂದ್ರ ಸರಕಾರ ಉದ್ಯಮಿಗಳ ಎರಡೂವರೆ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ.ರೈತರ ಸಾಲ ಮಾತ್ರ ಮನ್ನಾ ಮಾಡಲು ಕೇಂದ್ರಕ್ಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯ ಹರಿಹರದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ ಇದು ಆರ್ಥಿಕತೆ ಅದೋಗತಿ ಆಗಲ್ವೆ ದೇವೇಗೌಡ್ರು ಒಂದು ಸಾರಿನೂ ಸಾಲಮನ್ನಾ ಮಾಡಿ ಅಂತ ಚಕಾರ ಎತ್ತಿಲ್ಲ ಎಂದು ಆರೋಪಿಸಿದರು.
 
2004ರಲ್ಲಿ ನಾನು ಬಿಜೆಪಿ ಹೋಗಲು ಮಾತನಾಡಿದ್ದೆ ಅಂತ ಆರೋಪ ಮಾಡಲಾಗುತ್ತಿದೆ. ನಮ್ಮ ಹೋರಾಟ ಕೋಮುವಾದಿಗಳ ವಿರುದ್ದ ಜೆಡಿಯುಗೆ ಎಲ್ಲಾ ಮುಖಂಡರು ಹೋದಾಗ ನಾವು ಜೆಡಿಎಸ್ ಕಟ್ಟಿದ್ದೆವು ಎಂದು ತಿರುಗೇಟು ನೀಡಿದರು.
 
ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತು ಆಡುತ್ತಾರೆ. ಇದು ಬಿಜೆಪಿ ಹಿಡನ್ ಅಜೆಂಡ. ಸಂವಿಧಾನ ಮೂಲ ಸ್ವರೂಪ ಬದಲಾವಣೆ ಮಾಡಿದ್ರೆ ರಕ್ತಕ್ರಾಂತಿ ಆಗುತ್ತದೆ ಎಂದು ಕೇಂದ್ರ ಸರಕಾರವನ್ನು ಎಚ್ಚರಿಸಿದರು.
 
ಮುಸಲ್ಮಾನರಿಗೆ, ಕ್ರಿಶ್ಚಿಯನ್ ರಿಗೆ ಒಂದೂ ಟಿಕೆಟ್ ಕೊಟ್ಟಿಲ್ಲ. ಮೋದಿಯವರದ್ದು ಸಬ್ ಕಾ ಸಾತ್ ಅಲ್ಲ, ಸಬ್ ಕಾ ವಿನಾಶ್ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ ಆದ್ರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತೆ. ಬಿಜೆಪಿ ಬಣ್ಣದ ಮಾತುಗಳಿಗೆ ಮರುಳಾಗಬೇಡಿ ಎಂದು ಸಲಹೆ ನೀಡಿದರು.
 
ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಹರಿಹರದ ಭೈರನಪಾದ ನೀರಿನ ಯೋಜನೆ ಮಾಡ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಮತದಾರರಿಗೆ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತದಿಂದ ಬೇಜರಾಗಿದ್ದ ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31ಕೈದಿಗಳಿಗೆ ಬಿಡುಗಡೆ ಭಾಗ್ಯ

ಎಲ್‌ಪಿಜಿ ಸಿಲಿಂಡರ್‌ ಕೊರತೆ ಸಂಬಂಧ ರಾಜ್ಯದ ಸಂಸದರು ನ್ಯಾಯ ಸಿಗಲಿ: ಡಿಕೆ ಶಿವಕುಮಾರ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂದಿನ ಸುದ್ದಿ
Show comments