Webdunia - Bharat's app for daily news and videos

Install App

ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ವಾಗ್ದಾಳಿ

Webdunia
ಗುರುವಾರ, 6 ಏಪ್ರಿಲ್ 2017 (14:02 IST)
ಬರಿ ಜಂಭ, ಒಣಬುರುಡೆ ಬಿಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಆರೋಪಗಳಲ್ಲೂ ಸತ್ಯಾಂಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 
 
ಉಪಚುನಾವಣೆ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಇಂದು ರೋಡ್‌ಶೋ ನಡೆಸಿದ್ದಾರೆ. ಗೂಂಡಾ ಸಂಸ್ಕ್ರತಿ ಕಾಂಗ್ರೆಸ್ ಪಕ್ಷದ್ದಲ್ಲ. ಬಿಜೆಪಿಯವರದ್ದು ಫ್ಯಾಸಿಸ್ಟ್ ಮನೋಭಾವ ಎಂದು ಟೀಕಿಸಿದರು.
 
ಉಪಚುನಾವಣೆ ಫಲಿತಾಂಶದ ನಂತರ ಮತದಾರರು ಯಾರ ಮುಖ ನೋಡಿಕೊಂಡು ಮತಹಾಕಿದ್ದಾರೆ ಎನ್ನುವುದು ತಿಳಿಯುತ್ತದೆ. ಬಿಜೆಪಿಯವರ ಬಂಡವಾಳ ಚುನಾವಣೆ ಫಲಿತಾಂಶದ ನಂತರ ಬಹಿರಂಗವಾಗುತ್ತದೆ ಎಂದು ಗುಡುಗಿದರು. 
 
ರೋಡ್‌ಶೋದಿಂದಾಗಿ ಬಿಸಿಲಿನ ಬೇಗೆಯಿಂದ ಬಳಲಿದ ಸಿದ್ದರಾಮಯ್ಯ ತಣ್ಣನೆಯ ಮಜ್ಜಿಗೆ ಕುಡಿದು ದಾಹ ತೀರಿಸಿಕೊಂಡರು.
 
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜಿ.ಪರಮೇಶ್ವರ್. ದೇಶಪಾಂಡೆ, ತನ್ವೀರ್ ಸೇಠ್, ನಟ ಶಶಿಕುಮಾರ್, ನಟಿ ಜಯಮಾಲಾ ಸಚಿವರಾದ ಯು.ಟಿ. ಖಾದರ್, ಉಮಾಶ್ರೀ, ರಾಮಲಿಂಗಾರೆಡ್ಡಿ, ಎಚ್‌.ಅಂಜನೇಯ ಸಂಸದ ಧೃವನಾರಾಯಣ್ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments