Webdunia - Bharat's app for daily news and videos

Install App

ಯಾವ ಹೃದಯ ರೀ..? ಡಾ ಸಿಎನ್ ಮಂಜುನಾಥ್ ಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 28 ಮಾರ್ಚ್ 2024 (13:42 IST)
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಕೆ ಸುರೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಮೊದಲು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಸಾಥ್ ನೀಡಿದ್ದಾರೆ. ಈ ವೇಳೆ ಎದುರಾಳಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಾಧ್ಯಮಗಳು ಪ್ರಶ್ನಿಸಿದವು.

ಬಿಜೆಪಿಯಿಂದ ಹೃದಯ ತಜ್ಞ ಡಾ ಸಿಎನ್ ಮಂಜುನಾಥ್ ಕಣಕ್ಕಿಳಿದಿದ್ದಾರೆ. ಜನ ಈ ಬಾರಿ ‘ಹೃದಯ’ ನೋಡಿ ವೋಟ್ ಹಾಕಲಿದ್ದಾರೆ ಎಂಬ ಮಾತಿದೆ ಎಂಬ ಬಗ್ಗೆ ಕೇಳಿದಾಗ ಸಿಎಂ ಸಿದ್ದು ‘ಯಾವ ಹೃದಯ ರೀ? ಡಾ ಸಿಎನ್ ಮಂಜುನಾಥ್ ಸರ್ಕಾರಿ ಕೆಲಸದಲ್ಲಿದ್ದವರು. ಈಗ ನಿವೃತ್ತರಾಗಿ ರಾಜಕಾರಣಕ್ಕೆ ಬಂದಿದ್ದಾರೆ. ಅದೇ ಡಿಕೆ ಸುರೇಶ್ ಹಗಲು ರಾತ್ರಿ ಎನ್ನದೇ ಈ ಕ್ಷೇತ್ರಕ್ಕಾಗಿ ದುಡಿದಿದ್ದಾರೆ. ಅವರು ಖಂಡಿತಾ ಗೆಲ್ಲುತ್ತಾರೆ’ ಎಂದಿದ್ದಾರೆ.

ಕಾಂಗ್ರೆಸ್ ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಡಿಕೆ ಸುರೇಶ್ ಇಷ್ಟು ಸಮಯ ಸಂಸತ್ತಿನ ಹೊರಗೆ, ಒಳಗೆ ಈ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಜನ ಅವರ ಕೆಲಸ ನೋಡಿ ಖಂಡಿತವಾಗಿಯೂ ವೋಟ್ ಹಾಕುತ್ತಾರೆ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments