Webdunia - Bharat's app for daily news and videos

Install App

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಮತ್ತೆ ಟೆನ್ಷನ್

Krishnaveni K
ಸೋಮವಾರ, 2 ಸೆಪ್ಟಂಬರ್ 2024 (10:15 IST)
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ  ವಿರುದ್ಧ ರಾಜ್ಯಪಾಲರು ಆದೇಶಿಸಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಇಂದು ಮತ್ತೆ ಹೈಕೋರ್ಟ್ ನಲ್ಲಿ ನಡೆಯಲಿದೆ.

ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದರಂತೆ ಇಂದು ಮಧ್ಯಾಹ್ನ 2.30 ಕ್ಕೆ ಹೈಕೋರ್ಟ್ ಮತ್ತೊಂದು ಸುತ್ತಿನ ವಿಚಾರಣೆ ನಡೆಸಲಿದೆ. ಈಗಾಗಲೇ ಹೈಕೋರ್ಟ್ ಮೂರು ಬಾರಿ ಈ ವಿಚಾರವಾಗಿ ವಿಚಾರಣೆ ನಡೆಸಿ ಇಂದಿಗೆ ಮತ್ತೊಮ್ಮೆ ವಿಚಾರಣೆ ಮುಂದೆ ಹಾಕಿತ್ತು.

ಇಂದಿನ ವಿಚಾರಣೆ ರಂಗೇರುವ ಸಾಧ್ಯತೆಯಿದೆ. ಮೊನ್ನೆ ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಇಂದು ಸಿಎಂ ಪರ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ. ಅವಕಾಶವಿದ್ದರೆ ಮಾತ್ರ ಅಭಿಷೇಕ್ ಮನು ಸಿಂಘ್ವಿ, ದೂರುದಾರರ ಪರ ಕೆಜಿ ರಾಘವನ್ ವಾದ ಮಂಡಿಸಲಿದ್ದಾರೆ.

ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಿಯೋಗ ಪ್ರಾಸಿಕ್ಯೂಷನ್ ಗೆ ಆದೇಶಿಸಿರುವುದು ತಪ್ಪು ಎಂದು ವಾದ ಮಂಡಿಸಿದೆ. ಇದರ ಮಧ್ಯೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇಂದೇ ತೀರ್ಪು ಕೊಡುತ್ತದಾ ಅಥವಾ ಮತ್ತೆ ವಿಚಾರಣೆ ಮುಂದುವರಿಯಬಹುದಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments