Webdunia - Bharat's app for daily news and videos

Install App

ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ದೌಡು: ದಿಡೀರ್ ಭೇಟಿ ಯಾಕೆ

Krishnaveni K
ಬುಧವಾರ, 27 ನವೆಂಬರ್ 2024 (16:24 IST)
ನವದೆಹಲಿ: ಸಿಎಂ ಸಿದ್ದರಾಮಯ್ಯ ನಾಳೆ ದಿಡೀರ್ ಆಗಿ ದೆಹಲಿಗೆ ಭೇಟಿ ನೀಡಲಿದ್ದು ನಾಳೆ ಅಲ್ಲಿಯೇ ವಾಸ್ತವ್ಯ ಹೂಡಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ಉದ್ದೇಶವೇನು ಇಲ್ಲಿದೆ ವಿವರ.

ರಾಜ್ಯದಲ್ಲಿ ಉಪಚುನಾವಣೆ ಬಳಿಕ ಸಂಪುಟ ಪುನರರಾಚನೆ ಬಗ್ಗೆ ಮಾತುಗಳು ಜೋರಾಗಿದೆ. ಕೆಲವು ಸಚಿವರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ರಾಜ್ಯ ನಾಯಕರು ತೀರ್ಮಾನ ಮಾಡಿದ್ದಾರೆ. ಇದರ ಬಗ್ಗೆ ಹೈಕಮಾಂಡ್ ಬಳಿ ಚರ್ಚಿಸಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.

ಸಂಪುಟ ಪುನರರಾಚನೆಯಾಗಲಿದೆ ಎಂಬ ಸುದ್ದಿ ಬೆನ್ನಲ್ಲೇ ಹಲವು ಸಚಿವಾಕಾಂಕ್ಷಿಗಳು ಸಿಎಂ ಮುಂದೆ ತಮ್ಮ ಬೇಡಿಕೆಯಿಟ್ಟಿದ್ದಾರೆ. ಇಂದು ಚನ್ನಪಟ್ಟಣ ಶಾಸಕ ಸಿಪಿ ಯೋಗೇಶ್ವರ್ ಸಿಎಂ ನಿವಾಅಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಹೀಗಾಗಿ ರಾಜ್ಯ ನಾಯಕರು ಎಚ್ಚರಿಕೆಯ ಹೆಜ್ಜೆಯಿಡಲು ತೀರ್ಮಾನಿಸಿದ್ದಾರೆ.

ಈ ಕಾರಣಕ್ಕೆ ದೆಹಲಿಗೆ ತೆರಳಲಿರುವ ಸಿಎಂ ನಾಳೆ ಅಲ್ಲಿಯೇ ಉಳಿದುಕೊಂಡು ಶುಕ್ರವಾರದಂದು ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವರ ಬಳಿ ರಾಜ್ಯದ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಮಾಡುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಹಮ್ಮಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments