Webdunia - Bharat's app for daily news and videos

Install App

ಸಿಗರೇಟ್ ಬಿಟ್ಟ ಸಿಕ್ರೇಟ್ ಹೇಳಿದ ಸಿಎಂ ಸಿದ್ದರಾಮಯ್ಯ

Sampriya
ಸೋಮವಾರ, 1 ಜುಲೈ 2024 (16:27 IST)
Photo Courtesy X
ಬೆಂಗಳೂರು: ಈ ಹಿಂದೆ ಸಿಗರೇಟ್ ಸೇದುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದನ್ನು ಯಾಕೆ ಬಿಟ್ಟೆ ಎಂಬುದರ ಬಗ್ಗೆ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ನಾನು 1987ರಲ್ಲಿ ಸಿಗರೇಟ್‌ ಸೇದುವುದನ್ನು ಬಿಟ್ಟೆ. ಸಿಗರೇಟ್ ಸೇವನೆ ಮಾಡಿದ್ದರಿಂದ ನನಗೆ ಹೃದಯ ಸಂಬಂಧಿ ಕಾಯಿಲೆಗಳು ಶುರುವಾಯಿತು. 2000 ಇಸವಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮಾಡಿಸಿಕೊಂಡೆ. ಹಾರ್ಟ್ ಸಮಸ್ಯೆ ಜತೆ ಇದೀಗ ಡಯಾಬಿಟಿಕ್ ಕೂಡಾ ಸೇರಿಕೊಂಡಿದೆ ಎಂದರು.

ಸಿಗರೇಟ್ ಸೇವನೆ ಮಾಡುವುದರಿಂದ ಆಯಸ್ಸು ಕಡಿಮೆಯಾಗುತ್ತದೆ ಎಂದು ತಿಳಿದು ಅದಕ್ಕೂ ಪೂರ್ಣ ವಿರಾಮ ನೀಡಿದೆ. ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡರೆ ಅನೇಕ ರೋಗ ಕಂಟ್ರೋಲ್ ಆಗುತ್ತದೆ ಎಂದು ಅವರು ಸಲಹೆ ನೀಡಿದರು.

ವೈದ್ಯ ವೃತ್ತಿ ಪವಿತ್ರವಾದ ವೃತ್ತಿ‌. ಅದಕ್ಕೆ ವೈದ್ಯೋ ನಾರಾಯಣೋ ಹರಿ ಅಂತ ಕರೆಯುತ್ತಾರೆ. ವೈದ್ಯರು ದೇವರಿಗೆ ಸಮಾನರು ಎಂದು ನಂಬುತ್ತಾರೆ. ಇಂತಹ ವೈದ್ಯರು ಕೊರೊನಾ ಸಂದರ್ಭದಲ್ಲಿ ಮಾಡಿದ ಸೇವೆಯನ್ನು ಯಾರೂ ಮರೆಯುವಂತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments